ಬೆಂಗಳೂರು:- ಬೆಂಗಳೂರು ಮಂದಿಗೆ ಬಿಗ್ ಶಾಕ್ ಎದುರಾಗಿದ್ದು, ನೀರಿನ ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ.
Siddaramaiah: ಚುನಾವಣೆ ಫಲಿತಾಂಶಕ್ಕೂ, ಪೆಟ್ರೋಲ್-ಡೀಸೆಲ್ ಏರಿಕೆಗೂ ಸಂಬಂಧ ಇಲ್ಲ – ಸಿದ್ದರಾಮಯ್ಯ!
ಚುನಾವಣೆಯ ಬಳಿಕ ನೀರಿನ ಮೇಲಿನ ದರ ಏರಿಕೆ ಸುಳಿವು ನೀಡಿದ್ದ ಸರ್ಕಾರ, ಇದೀಗ 10 ವರ್ಷಗಳ ಬಳಿಕ ನೀರಿನ ದರ ಏರಿಕೆಗೆ ಪ್ಲಾನ್ ನಡೆಸಿದೆ. ಈಗಾಗಲೇ ಜಲಮಂಡಳಿ ದರ ಏರಿಕೆಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದು, ಜನರಿಗೆ ಮತ್ತಷ್ಟು ಹೊರೆಬೀಳುವ ಸಾಧ್ಯತೆ ಇದೆ.
ಅಧಿಕಾರಕ್ಕೆ ಬಂದ ಹೊತ್ತಲ್ಲೇ ಜಲಮಂಡಳಿಯ ನೀರಿನ ದರ ಏರಿಕೆ ಸುಳಿವು ನೀಡಿದ್ದ ಸರ್ಕಾರ, ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ನೀರಿನ ದರ ಪರಿಷ್ಕರಣೆಗೆ ಸದ್ದಿಲ್ಲದೇ ಸಜ್ಜಾಗುತ್ತಿದೆ. ನಗರಾಭಿವೃದ್ಧಿ ಸಚಿವರಾದ ಬಳಿಕ ಜಲಮಂಡಳಿಗೆ ಭೇಟಿ ನೀಡಿದ್ದ ವೇಳೆ ನೀರಿನ ದರ ಪರಿಷ್ಕರಣೆಯ ಸುಳಿವು ನೀಡಿದ್ದ ಡಿ.ಕೆ.ಶಿವಕುಮಾರ್, ಇದೀಗ ಜಲಮಂಡಳಿಯ ದರ ಏರಿಕೆ ಪ್ರಸ್ತಾವನೆಗೆ ಅಸ್ತು ಅನ್ನುವ ಸಾಧ್ಯತೆ ಇದೆ. 2014 ರಲ್ಲಿ ದರ ಪರಿಷ್ಕರಿಸಿದ್ದ ಜಲಮಂಡಳಿ, ಇದೀಗ ನೀರಿನ ದರ ಹೆಚ್ಚಳಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್ಗೆ ಕಾದುಕುಳಿತಿದೆ.
ಲೋಕಸಭಾ ಚುನಾವಣೆ ಬಳಿಕ ನೀರಿನ ದರ ಪರಿಷ್ಕರಣೆ ಬಗ್ಗೆ ಚಿಂತಿಸೋಣ ಎಂದಿದ್ದ ಸರ್ಕಾರ, ಇದೀಗ ತೆರೆಮರೆಯಲ್ಲಿ ನೀರಿನ ದರ ಪರಿಷ್ಕರಣೆಗೆ ಸಜ್ಜಾಗುತ್ತಿದೆ. ಗೃಹಬಳಕೆ, ವಾಣಿಜ್ಯ ಸೇರಿ ಎಲ್ಲ ರೀತಿಯ ನೀರು ಪೂರೈಕೆ ಮೇಲೆ ಶೇ40 ರಷ್ಟು ದರ ಏರಿಕೆಗೆ ಚರ್ಚೆ ನಡೆಯುತಿದ್ದು, ಸರ್ಕಾರ ಒಪ್ಪಿಗೆ ಸೂಚಿಸೂವುದೆ ತಡ, ದರ ಪರಿಷ್ಕರಿಸಲು ಜಲಮಂಡಳಿ ಕೂಡ ಸಜ್ಜಾಗಿ ಕುಳಿತಿದೆ.