ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಈ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಾಯಕರ ನಡುವೆ ವಾಗ್ಯುದ್ಧ ನಡಿತಿದೆ. ಬಿಜೆಪಿ ನಾಯಕರು ಬೆಲೆ ಏರಿಕೆಯ ವಿರುದ್ಧ ಸಮರ ಸಾರಿದ್ದು ಕೆರಳಿ ಕೆಂಡವಾಗಿದ್ದಾರೆ. ಕೈ ನಾಯಕರು ದರ ಏರಿಕೆಯನ್ನು ಸಮರ್ಥನೆ ಮಾಡಿಕೊಳ್ತಿದ್ದು ಸಿಎಂ ಸಿದ್ದರಾಮಯ್ಯ ಕೇಸರಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಈ ಮಧ್ಯೆ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಕರೆ ಕೊಟ್ಟಿದೆ… ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನ 3 ರೂ ಡೀಸೆಲ್ ಬೆಲೆಯನ್ನು 3.50 ಪೈಸಾ ಹೆಚ್ಚಿಸಿ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಇದೇ ವಿಚಾರ ಇದೀಗ ರಾಜಕೀಯ ಸ್ವರೂಪ ಪಡೆದಿದ್ದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ವೇದಿಕೆಯಾಗಿದೆ. ಈ ಹಿಂದೆ ಬಿಜೆಪಿ ಬೆಲೆ ಏರಿಕೆ ಮಾಡಿದಾಗ ಕಾಂಗ್ರೆಸ್ ನಾಯಕರು ಮಾಡಿದ್ದ ಪ್ರತಿಭಟನೆಯನ್ನೇ ಅಸ್ತ್ರ ವಾಗಿಸಿಕೊಂಡು ಬಿಜೆಪಿ ನಾಯಕರು ಕೈಗೆ ಟಾಂಗ್ ಕೊಡ್ತಿದ್ದಾರೆ..