ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರಕಾರ ಮತದಾರರ ಮೇಲೆ ರಾಜಕೀಯ ದ್ವೇಷ ತೋರುವುದನ್ನು ಬಿಡಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಿಸಿದೆ.
ಗ್ಯಾರಂಟಿಗಳ ಲಾಭ ಪಡೆದು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಮಾತುಗಳನ್ನು ಕಾಂಗ್ರೆಸ್ನ ಕೆಲ ನಾಯಕರು ಆಡುತ್ತಿದ್ದಾರೆ. ತೆರಿಗೆಯಲ್ಲಿ ಆಗುತ್ತಿರುವ ಕೊರತೆ ಸರಿದೂಗಿಸಲು ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸುತ್ತಿದ್ದು, ಇದು ಜನ ಸಾಮಾನ್ಯರಿಗೆ ಹೊರೆಯಾಗಲಿದೆ. ಈ ಮೂಲಕ ಮತದಾರರ ಮೇಲೆ ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದರು.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಮುಂಗಾರು ಪ್ರಾರಂಭವಾಗಿ ಕೃಷಿ ಚಟುವಟಿಕೆಗಳು ಗರಿಗೆದರುತ್ತಿರುವ ಸಮಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಇಂಧನ ಅವಶ್ಯಕ. ಆದರೆ ದರ ಹೆಚ್ಚಳ ರೈತರಿಗೆ ಹಾಗೂ ಕರಾವಳಿ ಮೀನುಗಾರರಿಗೂ ಹೊರೆಯಾಗಲಿದೆ. ಸದ್ಯದಲ್ಲೇ ಕೆಎಸ್ಆರ್ಟಿಸಿ ಪ್ರಯಾಣ ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದರು.
ಒಂದು ವರ್ಷದಿಂದ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಿಲ್ಲ. ಅಂಗನವಾಡಿಗಳ ಬಾಡಿಗೆ, ಅದರ ಕಾರ್ಯಕರ್ತರಿಗೆ ವೇತನ ನೀಡಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಆದರೂ ಸರಕಾರ ತೋರಿಕೆಗೆ ಗ್ಯಾರಂಟಿ ಯೋಜನೆಗಳನ್ನು ನಡೆಸುತ್ತಿದೆ ಎಂದರು.