ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಆರಂಭದಲ್ಲಿ, ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ.
ಇನ್ನೂ ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಮೊಬೈಲ್ ಅನ್ನು ಸುಮನಹಳ್ಳಿ ಬ್ರಿಡ್ಜ್ ಬಳಿಯ ರಾಜಕಾಲುವೆಯಲ್ಲಿ ಆರೋಪಿ ವಿನಯ್ ಬಿಸಾಕಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಮೊಬೈಲ್ ಬಿಸಾಕಿದ ಜಾಗಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆತಂದು ಮಹಜರಿಗೆ ಒಳಪಡಿಸಿದ್ದಾರೆ.
Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!
ಸುಮನಹಳ್ಳಿಯ ಸತ್ವ ಅನುಗ್ರಹ ಲೇಔಟ್ ಬಳಿಯಿರುವ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಬಿಸಾಕಿದ್ದರು. ಆರೋಪಿ ವಿನಯ್, ರೇಣುಕಾಸ್ವಾಮಿ ಬಳಸುತ್ತಿದ್ದ ಮೊಬೈಲ್ ಅನ್ನು ಇದೇ ರಾಜಕಾಲುವೆಯಲ್ಲಿ ಎಸೆದಿರುವುದಾಗಿ ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಆರೋಪಿ ವಿನಯ್ ಅನ್ನು ಎಸಿಪಿ ಚಂದನ್ ಕುಮಾರ್ ನೇತೃತ್ವದ ತಂಡ ಕರೆದುಕೊಂಡು ಮಹಜರಿಗೆ ಒಳಪಡಿಸಿದೆ.