ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಗೆ ಮತ್ತೊಂದು ಕಂಟಕ ಎದುರಾಗಿದೆ. ದರ್ಶನ್ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ ಬರುವ ಸಾಧ್ಯತೆಯಿದೆ.
2016ರಲ್ಲಿ ರಾಜ ಕಾಲುವೆ ಒತ್ತುವರಿ ತೆರವಿಗೆ ಸರ್ಕಾರ ಸೂಚಿಸಿತ್ತು. ಒತ್ತುವರಿ ಮಾಡಿಕೊಂಡ ಕಟ್ಟಡಗಳ ಪಟ್ಟಿ ಮಾಡಿ ಬಿಬಿಎಂಪಿ ಬಿಡುಗಡೆ ಮಾಡಿತ್ತು. ರಾಜಕಾಲುವೆಯ ಬಫರ್ ಝೋನ್ ಮೇಲೆ ದರ್ಶನ್ ನಿವಾಸ ನಿರ್ಮಾಣವಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಒತ್ತುವರಿ ತೆರವು ಕಾರ್ಯಾಚರಣೆ ಮಾಡುವಾಗ ದರ್ಶನ್ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಆರ್.ಆರ್ ನಗರದಲ್ಲಿ ಒಟ್ಟು 70 ಕಡೆ ಒತ್ತುವರಿ ಆಗಿರುವುದು ಪತ್ತೆಯಾಗಿತ್ತು. ಹಳೆಯ 37 ಕಡೆ, ಹೊಸದಾಗಿ 33 ಕಡೆ ಒತ್ತುವರಿಯಾಗಿರುವುದು ಬಿಬಿಎಂಪಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಈಗ ಬಿಬಿಎಂಪಿ ತಡೆ ನೀಡಲಾಗಿರುವ ಪ್ರಕರಣಗಳನ್ನ ತೆರವು ಮಾಡಿಸಲು ಮುಂದಾಗಿದೆ.