ವಿಜಯಪುರ: 16ವರ್ಷದ ಬಾಲಕನೊಂದಿಗೆ 28ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 4ವರ್ಷದ ಮಗುವಿನೊಂದಿಗೆ ಅಪ್ರಾಪ್ತ ಬಾಲಕನೊಂದಿಗೆ ವಿವಾಹಿತ ಮಹಿಳೆ ಎಸ್ಕೇಪ್ ಆಗಿದ್ದು, ವಿವಾಹಿತ ಮಹಿಳೆ ನನ್ನ ಮಗನನ್ನು ಅಪರಹಿಸಿಕೊಂಡು ಹೋಗಿದ್ದಾಳೆ ಎಂದು ತಾಯಿ ಅಕ್ಕಮಹಾದೇವಿ ಆರೋಪ ಮಾಡಿದ್ದಾರೆ. ಮಲ್ಲಿಕಾರ್ಜುನ ಹಿರೇಮಠ ಎಂಬಾತ ಬಾಲಕನನ್ನು ಮಲ್ಲಮ್ಮ ಶೇಖಣ್ಣಿ ಎಂಬ ಮಹಿಳೆ ಕರೆದುಕೊಂಡು ಎಸ್ಕೇಪ್ ಆಗಿದ್ದಾರೆ.
Recruitment 2024: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..! ತಿಂಗಳಿಗೆ 1 ಲಕ್ಷಕ್ಕೂ ಅಧಿಕ ಸಂಬಳ
ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಇಬ್ಬರ ಮಧ್ಯೆ ಲವ್ ಆಗಿದ್ದು, ಮಲ್ಲಿಕಾರ್ಜುನನನ್ನು ಪುಸಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾಳೆ ಅಂತ ಬಾಲಕನ ತಾಯಿ ಆರೋಪ ಮಾಡಿದ್ದಾರೆ. ಹಿಂದೆ ಆ ಮಹಿಳೆಗಾಗಿ ಮಲ್ಲಿಕಾರ್ಜುನ ವಿಷ ಸೇವಿಸಿದ್ದನು. ಮೇ 13ರಂದು ಪೊಲೀಸ್ ಠಾಣೆಯಲ್ಲಿ ಅಪಹರಣ ಕೇಸ್ ದಾಖಲು ಮಾಡಲಾಗಿದ್ದು, ಈವರೆಗೂ ಪೊಲೀಸರು ಬಾಲಕನನ್ನು ಪತ್ತೆ ಮಾಡುತ್ತಿಲ್ಲ ಎಂದು ಪೊಲೀಸರ ನಡೆಗೆ ಬಾಲಕನ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.