ದೊಡ್ಡಬಳ್ಳಾಪುರ: ಸಿಡಿಲಿನ ಒಡೆತಕ್ಕೆ ಮನೆಯ ಗೋಡೆ ಕುಸಿತಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿನಡೆದಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆಯಾಗಿದ್ದು, ರಾತ್ರಿ ಸುರಿದ ಸಿಡಿಲು ಗುಡುಗು ಸಹಿತ ಜಡಿ ಮಳೆಗೆ ಗೋಡೆ ಕುಸಿತಗೊಂಡಿದೆ.
ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದರಿಂದ ಪ್ರಾಣಾಪಯದಿಂದ ಪಾರಾಗಿದ್ದು, ಗೋಡೆ ಕುಸಿತದಿಂದ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.