ಬೆಂಗಳೂರು:- ಬೆಂಗಳೂರು ವಿವಿಯಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕುವಂತೆ ಕೋರಿ ಸರ್ಕಾರಕ್ಕೆ ಬಸವರಾಜ್ ಹೊರಟ್ಟಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ನಾಗರಬಾವಿ ಕಡೆಯಿಂದ ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೇ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ನಾಗರಬಾವಿಯಿಂದ ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಹೆಚ್ಚಾಗಿ ಜನರ ಸಂಚಾರ ಕಂಡುಬರ್ತಿದೆ. ಹೀಗಾಗಿ ಅಪಘಾತ ಹೆಚ್ಚಾಗಿ ವಿದ್ಯಾರ್ಥಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ವಾಹನಗಳ ಆರ್ಭಟ ಹೆಚ್ಚಾಗಿರುವ ಹಿನ್ನಲೆ ನಿತ್ಯ ಸಾವಿರಾರು ಬೈಕ್ ಕಾರು ಆಟೋ ಬಸ್ ಕ್ಯಾಂಪಸ್ ನಲ್ಲಿ ಸಂಚಾರ ಮಾಡ್ತೀದ್ದು ಕ್ಯಾಂಪಸನಲ್ಲಿ ಓಡಾಡುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯದಲ್ಲಿಯೇ ಓಡಾಡಬೇಕಿದೆ. ನಿತ್ಯ ಹಾಸ್ಟೇಲ್, ಕ್ಯಾಂಪಸ್ ನಲ್ಲಿ ರೋಡ್ ಕ್ರಾಸ್ ಮಾಡಲು ಪರದಾಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಕ್ಯಾಂಪಸ್ ಭಾಗದಲ್ಲಿ ಸಮಯ ನಿರ್ಬಂಧ ಪ್ರಯೋಜನ ಇಲ್ಲವಾಗಿದೆ. ಹೀಗಾಗಿ ಕ್ಯಾಂಪಸ್ ನಲ್ಲಿ ಮೀತಿ ಮಿರಿದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕುವಂತೆ ವಿವಿಯ ಶಿಕ್ಷಕರು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.
ಇನ್ನೂ ಈ ಬಗ್ಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದು ಜ್ಞಾನಭಾರತಿ ವಿವಿಯ ವಾಹನಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸಾರ್ವಜನಿಕರಿಗೆ ಪರ್ಯಾಯ ರಸ್ತೆ ಕಲ್ಪಿಸುವಂತೆ ಒತ್ತಾಯ ಮಾಡಿದ್ದಾರೆ. ಕ್ಯಾಂಪಸ್ ನಲ್ಲಿ ಸಾರ್ವಜನಿಕೆ ಓಡಾಟಕ್ಕೆ ಬ್ರೇಕ್ ಹಾಕುವಂತೆ ಮನವಿ ಮಾಡಿದ್ದು ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ವಿವಿ ಕೂಡಾ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದು ಪರ್ಯಾಯ ರಸ್ತೆ ಕಲ್ಪಿಸುವ ಬಗ್ಗೆ ಕೂಡಾ ಪ್ಲಾನ್ ಮಾಡಿದೆ.