ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಅವರು ಪೊಲೀಸರ ಮುಂದೆ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ್ದಾರೆ.
ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಕೇಸ್.. ಮಹಾರಾಷ್ಟ್ರ ಗಡಿಭಾಗದಲ್ಲಿ ಫುಲ್ ಅಲರ್ಟ್..!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದು, ಈ ಪ್ರಕರಣದಲ್ಲಿ ತಮ್ಮ ಪಾತ್ರದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ನೀಡಿದ್ದಾರೆ. ಕೊಲೆಯಲ್ಲಿ ತಾವು ಭಾಗಿ ಆಗಿರುವ ವಿಷಯದಿಂದ ಹಿಡಿದು ಪ್ರಕರಣದಲ್ಲಿ ತಮ್ಮ ಹೆಸರು ಮುನ್ನೆಲೆಗೆ ಬರದಂತೆ ತಡೆಯಲು ಮಾಡಿದ್ದ ಪ್ರಯತ್ನ, ಪ್ರದೋಶ್ಗೆ 30 ಲಕ್ಷ ರೂಪಾಯಿ ಹಣ ನೀಡಿದ್ದು, ಆ ನಂತರ ಪ್ರಭಾವಿಗಳನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ನೀಡಿದ್ದು ಎಲ್ಲವನ್ನೂ ಹೇಳಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣದಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರ ಸಂಖ್ಯೆ ಹೆಚ್ಚಿದೆ. ಅದರಲ್ಲಿ ದರ್ಶನ್ ಸಹ ಒಬ್ಬರಾಗಿದ್ದು, ಸ್ವ-ಇಚ್ಛೆ ಹೇಳಿಕೆ ದಾಖಲಿಸಿದಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗಬಹುದೆಂಬ ನಿರೀಕ್ಷೆಯಿಂದ ಹಾಗೂ ಪೊಲೀಸ್ ಕಸ್ಟಡಿಯನ್ನು ಆದಷ್ಟು ಬೇಗ ಅಂತ್ಯಗೊಳಿಸುವ ದೃಷ್ಟಿಯಿಂದ ದರ್ಶನ್ ಹೀಗೆ ಮಾಡಿರಬಹುದು ಎನ್ನಲಾಗುತ್ತಿದೆ. ಏನೇ ಆಗಲಿ, ದರ್ಶನ್ರ ಸ್ವ-ಇಚ್ಛಾ ಹೇಳಿಕೆಯಿಂದ ಪ್ರಕರಣ ಇನ್ನಷ್ಟು ಸುಲಭವಾಗಿದ್ದು, ಹೇಳಿಕೆಯ ಅನುಸಾರ ಪೊಲೀಸರು ಸಾಕ್ಷ್ಯಗಳನ್ನಷ್ಟೆ ಒಂದು ಮಾಡಬೇಕಿದೆ. ಅದರಲ್ಲಿ ಹಲವು ಸಾಕ್ಷ್ಯಗಳನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡಿದ್ದಾರೆ.