ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Renukaswamy Murder Case: ಡಿ ಗ್ಯಾಂಗ್ ಕಸ್ಟಡಿ ಇಂದು ಅಂತ್ಯ; ಪರಪ್ಪನ ಅಗ್ರಹಾರ ಸೇರುತ್ತಾರಾ ಆರೋಪಿಗಳು!
ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡಗಳಿಗೆ ಹವಾಮಾನ ಇಲಾಖೆಯ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಜಿಲ್ಲೆಗಳಲ್ಲಿ ಜೂನ್ 21, 22 ಮತ್ತು 23ರಂದು ಭಾರೀ ಮಳೆಯಾಗುವ ಎಲ್ಲ ಲಕ್ಷಣಗಳೂ ಇವೆ. ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಬಿರುಗಾಳಿ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ. ಇದೇ ರೀತಿ ಉತ್ತರ ಒಳನಾಡಿನ ಹಲವೆಡೆ ಗಾಳಿ 30ರಿಂದ 40 ಕಿಲೋ ಮೀಟರ್ ವೇಗವಾಗಿ ಬೀಸಲಿದೆ. ಈ ವಲಯದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬಹುತೇಕ ಇಡೀ ದಿನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ