ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಹಾಗೂ ಆತನ ಗ್ಯಾಂಗ್ ಸದಸ್ಯರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇಂದು ಇವರಗಳು ಕಸ್ಟಡಿ ಅಂತ್ಯವಾಗಲಿದ್ದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಬಂಧನದ ಕುರಿತು ಸಾಷಕ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಈ ಬಗ್ಗೆ ಕೇಳ್ತಿದ್ದಂಗೆ ನಟ ಪ್ರೇಮ್ ಸೈಲೆಂಟ್ ಆಗಿದ್ದಾರೆ.
ಪ್ರೇಮ್ ಆಪ್ತ ಸ್ನೇಹಿತ ಬನ್ನೂರಿನ ಮಹೇಂದ್ರ ಸಿಂಗ್ ಕಾಳಪ್ಪ ಅವರ ತಂದೆಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಟ ಪ್ರೇಮ್ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದವರು ದರ್ಶನ್ ಕುರಿತಾಗಿ ಪ್ರಶ್ನಿಸುತ್ತಿದ್ದಂತೆ ‘ಪ್ಲೀಸ್, ಆ ಬಗ್ಗೆ ಪ್ರಶ್ನಿಸಬೇಡಿ’ ‘ದಯಮಾಡಿ ಕಾರ್ಯಕ್ರಮದ ಬಗ್ಗೆ ಮಾತ್ರ ಮಾತಾಡಿ. ವೇದಿಕೆ ಮೇಲೆ ಆ ಕುರಿತು ಪ್ರತಿಕ್ರಿಯಿಸಲು ಪ್ರಶ್ನಿಸಬೇಡಿ’ ಎಂದ ಪ್ರೇಮ್. ದರ್ಶನ್ ಕುರಿತು ಯಾವುದೇ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಸಾಕಷ್ಟು ಮಂದಿ ಪ್ರತಿಕ್ರಿಯೆ ನೀಡಿದ್ದಾರೆ. ನಟಿ ರಮ್ಯಾ, ರಚಿತಾ ರಾಮ್, ಅನಿರುದ್ಧ್, ಇಂದ್ರಜಿತ್ ಲಂಕೇಶ್, ಉಮಾಪತಿ ಶ್ರೀನಿವಾಸ್ ಗೌಡ, ಸುದೀಪ್ ಹೀಗೆ ಸಾಕಷ್ಟು ಮಂದಿ ಮಾತನಾಡಿದ್ದಾರೆ. ಆದರೆ ಲವ್ಲಿ ಸ್ಟಾರ್ ಪ್ರೇಮ್ ಮಾತ್ರ ಆ ಬಗ್ಗೆ ಏನನ್ನೂ ಪ್ರಶ್ನಿಸಬೇಡಿ ಎಂದು ಹೇಳುವ ಮೂಲಕ ಘಟನೆಯ ಕುರಿತು ಮಾತನಾಡಲು ಹಿಂದೇಟು ಹಾಕಿದ್ದಾರೆ.