ಕಲಬುರಗಿ:- ಹೋಟೆಲ್ ನ ಕಿಚನ್ ನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ ಭಾರಿ ಅನಾಹುತ ತಪ್ಪಿದ ಘಟನೆ ಕಲಬುರಗಿಯ ಸಪ್ತಗಿರಿ ಆರೆಂಜ್ ಹೋಟೆಲ್ನಲ್ಲಿ ಜರುಗಿದೆ.
ಟಿಕೆಟ್ ರಹಿತ ಪ್ರಯಾಣ.. ಒಂದೇ ತಿಂಗಳಲ್ಲಿ KSRTC ಸಂಗ್ರಹಿಸಿದ ದಂಡ ಎಷ್ಟು ಗೊತ್ತಾ!?
ಹೋಟೆಲ್ನಲ್ಲಿದ್ದ ಐದಾರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. ಬೆಳ್ಳಂ ಬೆಳಿಗ್ಗೆ ಸಿಲೆಂಡರ್ ಬ್ಲಾಸ್ಟ್ ಆಗಿ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದೆ. ಗಾಯಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಘಟನೆ ಜರುಗಿದೆ.