ಉತ್ತರ ಕನ್ನಡ :– ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಕೊಪ್ಪಳಕರವಾಡಿ ವಾರ್ಡ್ನಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಫೋಟ ವಾದ ಘಟನೆ ಜರುಗಿದೆ.
“ಸಾಹಿತಿಗಳೂ ರಾಜಕಾರಣಿಗಳೇ”.. DCM ಡಿಕೆಶಿ ಹೇಳಿಕೆಗೆ ವ್ಯಾಪಕ ಆಕ್ರೋಶ..!
ಮನೆಯಿಂದ ಹೊರಗೆ ಹೋದ ವೇಳೆ ಗ್ಯಾಸ್ ಸಿಲಿಂಡರ್ ಲೀಕ್ ಆಗಿತ್ತು. ಬಳಿಕ ಮನೆಗೆ ಬಂದು ಬಾಗಿಲು ತೆರೆಯುತ್ತಿದ್ದಂತೆ ಸಿಲಿಂಡರ್ ಸ್ಪೋಟಗೊಂಡಿದೆ. ಇತ್ತ ಸಿಲಿಂಡರ್ ಸ್ಪೋಟಕ್ಕೆ ಮಧುಕರ ಶೆಟ್ಟಿ ಪತ್ನಿ ಲತಾ ಶೆಟ್ಟಿ ಬೆಚ್ಚಿಬಿದ್ದಿದ್ದಾರೆ. ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಇನ್ನು ಸ್ಪೋಟದ ಭಯಾನಕ ಶಬ್ಧಕ್ಕೆ ಸ್ಥಳೀಯರು ಕಂಗಾಲಾಗಿದ್ದಾರೆ. ಘಟನೆಯಿಂದ ಮನೆಯ ಒಳಭಾಗ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಪೀಠೋಪಕರಣ, ಟಿ.ವಿ ಸೇರಿ ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿ ಭಸ್ಮವಾಗಿದೆ. ಘಟನೆಯಲ್ಲಿ ಲತಾ ಶೆಟ್ಟಿ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.