ನೆಲಮಂಗಲ : ಗ್ಯಾರಂಟಿಗಳ ಮೂಲಕ ಅಬ್ಬರಿಸಿದ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ ಕೇವಲ 9ಸ್ಥಾನಗಳನ್ನು ಮಾತ್ರ ಗೆಲ್ಲುವ ಮೂಲಕ ನೆಲಕಚ್ಚಿದರೂ ಸಹ ಬಿಜೆಪಿ ಮತ್ತು ಜೆಡಿಎಸ್ನವರನ್ನು ಅಣಕಿಸುತ್ತಿರುವುದು ಸರಿಯೇ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಸದ ಡಾ ಕೆ ಸುಧಾಕರ್ ವಾಗ್ದಾಳಿ ನಡೆಸಿದರು. ಲೋಕಸಭೆಯ ಗೆಲುವು ರಾಜಕೀಯ ಪುನರ್ಜನ್ಮ ನೀಡಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದ್ದು, ಕ್ಷೇತ್ರದಲ್ಲಿ 6 ಕಾಂಗ್ರೆಸ್ ಶಾಸಕರಿದ್ದರು ಸಹ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಯಲಹಂಕ ಕ್ಷೇತ್ರದ ಮತದಾರರು ನೀಡಿದ ಲೀಡ್ ಬಹಳಷ್ಟು ಶಕ್ತಿ ಕೊಟ್ಟಿದೆ. ಯಲಹಂಕ ಕ್ಷೇತ್ರದ ಮತದಾರರು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು,ಕಾರ್ಯಕರ್ತರ ಬಲವನ್ನು ಉಸಿರಿರುವ ತನಕ ಮರೆಯುವುದಿಲ್ಲ ಎಂದು ಹೇಳಿದರು.
ತೂಕ ಕಡಿಮೆ ಮಾಡಿಕೊಳ್ಳುವಾಗ ಮೀನು ಮತ್ತು ಚಿಕನ್ʼಗಳಲ್ಲಿ ಯಾವುದು ಒಳ್ಳೆಯದು..? ಇಲ್ಲಿದೆ ನೋಡಿ
ಗ್ಯಾರಂಟಿಗಳ ಅಲೆಯಲ್ಲಿ ನೆಲಕಚ್ಚಿದ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟದ ಮೇಲೆ ಸಂಕಷ್ಟ ನೀಡುತ್ತಿದೆ. ಇದೇ ರೀತಿ ಮುಂದುವರಿದರೆ ರಾಜ್ಯವನ್ನು ಮಾರುವ ಸ್ಥಿತಿಗೆ ಕಾಂಗ್ರೆಸ್ ಬರುತ್ತದೆ. ರಾಜ್ಯದಲ್ಲಿ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ಅಣಕಿಸಲು ಬರುತ್ತಿದೆ. ಇದಕ್ಕೆ ಉತ್ತರ ಸಿಗಲಿದೆ ಎಂದು ಸುಧಾಕರ್ ಕಿಡಿಕಾರಿದರು.