ರೇಣುಕಾಸ್ವಾಮಿ ಫೇಕ್ ಅಕೌಂಟ್ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡ್ತಿದೆ. ಈ ಪ್ರಕರಣದಲ್ಲಿ ಈಗ ನಟ ದರ್ಶನ್ ಸೇರಿದಂತೆ 17 ಮಂದಿ ಅರೆಸ್ಟ್ ಆಗಿ, ಜೈಲಿಗೆ ಹೋಗಿದ್ದಾರೆ. ಇದೀಗ ‘ಬಿಗ್ ಬಾಸ್’ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಒಂದು ಗಂಭೀರ ಆರೋಪ ಮಾಡಿದ್ದಾರೆ. ಅದೇನೆಂದರೆ, ರೇಣುಕಾ ಸ್ವಾಮಿ ಕ್ರಿಯೆಟ್ ಮಾಡಿದ್ದ ಫೇಕ್ ಅಕೌಂಟ್ಗಳಿಂದ ನನಗೂ ಅಶ್ಲೀಲ ಮೆಸೇಜ್ ಬಂದಿತ್ತು ಎಂದಿದ್ದಾರೆ.
ಈ ಕುರಿತು ಚಿತ್ರಾಲ್ ರಂಗಾಸ್ವಾಮಿ ಅವರು, “ಸದ್ಯ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಯಾರಿಗೂ ಸಪೋರ್ಟ್ ಮಾಡುವುದಕ್ಕೆ ಬಂದಿಲ್ಲ. ರೇಣುಕಾ ಸ್ವಾಮಿ ಫ್ಯಾಮಿಲಿಗೆ ದೇವರು ಆದಷ್ಟು ಶಕ್ತಿ ಕೊಡಲಿ. ಆದರೆ ಈ ರೇಣುಕಾ ಸ್ವಾಮಿ ಇನ್ನೂ ಒಂದಿಬ್ಬರಿಗೆ ಇದೇ ಮೆಸೇಜ್ ಕಳುಹಿಸಿದ್ದರು, ಅದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿತ್ತು. ಅವರು ಮೆಸೇಜ್ ಕಳುಹಿಸುತ್ತಿದ್ದ ಅಕೌಂಟ್ goutham_ks_1990 ಈ ಹೆಸರಿನಲ್ಲಿ ಇತ್ತು ಎಂಬುದನ್ನು ನಾನು ನ್ಯೂಸ್ನಲ್ಲಿ ನೋಡಿದ್ದೆ” ಎಂದು ಹೇಳಿದ್ದಾರೆ.
ತೂಕ ಕಡಿಮೆ ಮಾಡಿಕೊಳ್ಳುವಾಗ ಮೀನು ಮತ್ತು ಚಿಕನ್ʼಗಳಲ್ಲಿ ಯಾವುದು ಒಳ್ಳೆಯದು..? ಇಲ್ಲಿದೆ ನೋಡಿ
“ನನಗೆ ಅಶ್ಲೀಲವಾದ ಮೆಸೇಜ್, ಫೋಟೋಗಳನ್ನು ಕಳುಹಿಸಿದರೆ, ನಾನು ಅಂಥ ಅಕೌಂಟ್ಗಳನ್ನು ಬ್ಲಾಕ್ ಮಾಡುತ್ತೇನೆ. goutham_ks_1990 ಈ ಐಡಿ ಬಗ್ಗೆ ಗೊತ್ತಾದಾಗ ಈ ಐಡಿಯನ್ನು ಎಲ್ಲೋ ನೋಡಿದ್ದೇನೆ ಅಲ್ವಾ ಅಂತ ಅನ್ನಿಸಿತು. ನನ್ನ ಬ್ಲಾಕ್ ಲಿಸ್ಟ್ ಅನ್ನು ಚೆಕ್ ಮಾಡಿದಾಗ, ಈ ಅಕೌಂಟ್ ಅದರಲ್ಲಿದೆ. ಇದನ್ನು ನೋಡಿ ನನಗೂ ಭಯ ಆಯ್ತು. ನಿಮ್ಮ ಬ್ಲಾಕ್ ಲಿಸ್ಟ್ನಲ್ಲಿ ಈ ಅಕೌಂಟ್ ಇದೆಯಾ ಎಂದು ನೀವು ಒಮ್ಮೆ ಚೆಕ್ ಮಾಡಿಕೊಳ್ಳಿ” ಎಂದು ಚಿತ್ರಾಲ್ ಹೇಳಿದ್ದಾರೆ.
“ಇದಕ್ಕೆ ಏನ್ ಹೇಳುವುದು ಗೊತ್ತಾಗುತ್ತಿಲ್ಲ. ಅಷ್ಟೊಂದು ಚೆನ್ನಾಗಿರುವ ಹೆಂಡತಿ ಇರುವಾಗ, ಬೇರೆಯವರಿಗೆ ಈ ರೀತಿ ಮೆಸೇಜ್ ಕಳುಹಿಸುವುದು ಯಾಕೆ ಬೇಕು? ಸುಮಾರು ಜನರಿಗೆ ಇದೆಲ್ಲಾ ಕಾಮನ್ ಎಂದುಕೊಳ್ಳಬಹುದು. ಆದರೆ ಆ ರೀತಿ ಮೆಸೇಜ್ಗಳನ್ನು ನೋಡಿದಾಗ, ಏನಪ್ಪಾ ಇದು ಥೂ ಅಂತ ಅನ್ನಿಸುತ್ತದೆ. ನಾನು ಯಾರ ಪರವಾಗಿಯೂ ಸಪೋರ್ಟ್ ಮಾಡುತ್ತಿಲ್ಲ. ಆದರೆ ಇನ್ನೊಬ್ಬರ ಪರ್ಸನಲ್ ವಿಷಯಗಳ ಬಗ್ಗೆ ಕಾಮೆಂಟ್ ಸೆಕ್ಷನ್ನಲ್ಲಿ ಕಾಮೆಂಟ್ ಹಾಕಿ ಜಡ್ಜ್ ಮಾಡುವುದಕ್ಕೆ ಹೋಗಬೇಡಿ. ನಿಮ್ಮ ಜೀವನವನ್ನು ನೀವು ನೋಡಿಕೊಳ್ಳಿ” ಎಂದು ಚಿತ್ರಾಲ್ ಹೇಳಿದ್ದಾರೆ.