ಬೆಂಗಳೂರು:- ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ದಿನವಿಡೀ ಎನರ್ಜಿಟಿಕ್ ಆಗಿರ್ಬೇಕಾ!?.. ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ನೀರು ಸೇವಿಸಿ!
ಈ ಸಂಬಂಧ ಮಾತನಾಡಿದ ಅವರು,ಸೂರಜ್ ರೇವಣ್ಣ (Suraj Revanna Case) ವಿಚಾರವಾಗಿ ನನಗ್ಯಾಕೆ ಪ್ರಶ್ನೆ ಕೇಳ್ತೀರಿ? ನೀವು ನನಗೆ ಬೆದರಿಕೆ ಹಾಕುತ್ತಿದ್ದೀರಿ? ಈ ರೀತಿಯ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವ ಅಗತ್ಯ ಇಲ್ಲ ಎಂದರು.
ಚನ್ನಪಟ್ಟಣಕ್ಕೆ (Channapatna) ಭೇಟಿ ಹಾಗೂ ಅಭ್ಯರ್ಥಿ ಆಯ್ಕೆ ವಿಚಾರವಾಗಿ, ಯಾವ ಅಭ್ಯರ್ಥಿ ಬಗ್ಗೆಯೂ ಚರ್ಚೆ ಮಾಡಲ್ಲ. ನಿಧಾನವಾಗಿ ಆಯ್ಕೆ ಮಾಡೋಣ ನನಗೇನು ಆತುರ ಇಲ್ಲ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಚನ್ನಪಟ್ಟಣಕ್ಕೆ ಭೇಟಿಕೊಡುವ ವಿಚಾರವಾಗಿ, ಅವರನ್ನು ಹಿಡಿದುಕೊಂಡಿರುವವರು ಯಾರು? ಹೋದರೆ ತಪ್ಪೇನಿದೆ? ಅವರೊಬ್ಬ ಮಂತ್ರಿಗಳಿದ್ದಾರೆ, ಉಪಮುಖ್ಯಮಂತ್ರಿಗಳು ಬೇರೆ, ಅಲ್ಲದೇ ಡಿಫ್ಯಾಕ್ಟೊ ಚೀಫ್ ಮಿನಿಸ್ಟರ್ ಬೇರೆ. ಅವರನ್ನ ಹೋಗಬೇಡಿ ಅಂತ ಹೇಳೋಕೆ ಆಗುತ್ತಾ? ಚನ್ನಪಟ್ಟಣದ ಬಗ್ಗೆ ಈಗಲಾದ್ರೂ ಗಮನಹರಿಸಿದ್ದಕ್ಕೆ ಅವರಿಗೆ ಅಭಿನಂದಿಸೋಣ ಎಂದರು.