ಪಾಟ್ನಾ:- ನೆಟ್ ಪರೀಕ್ಷೆ ಪೇಪರ್ ಸೋರಿಕೆ ಕೇಸ್ ಗೆ ಸಂಬಧಪಟ್ಟಂತೆ ತನಿಖೆಗೆ ತೆರಳಿದ್ದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿದೆ.
ನೀವು ಬೇಗ ಸಣ್ಣ ಆಗ್ಬೇಕಾ!?.. ನಿತ್ಯ ಹಸಿ ಬೆಳ್ಳುಳ್ಳಿಯನ್ನು ಹೀಗೆ ತಿನ್ನಿ..!
ಕೇಂದ್ರೀಯ ತನಿಖಾ ದಳದ ಅಧಿಕಾರಿಗಳ ಮೇಲೆ ಬಿಹಾರದ ನಾವಡಾದ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಗ್ರಾಮಸ್ಥರು ನಕಲಿ ಅಧಿಕಾರಿಗಳು ಎಂದು ಭಾವಿಸಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಸುಮಾರು 200 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಲ್ಲಿ ಎಂಟು ಮಂದಿಯನ್ನು ಮಾತ್ರ ಹೆಸರಿಸಲಾಗಿದೆ. ಹಲ್ಲೆಯನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಲಾಗಿದ್ದು, ವಿಡಿಯೋಗಳ ಆಧಾರದ ಮೇಲೆ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ. ಹಲ್ಲೆಯಲ್ಲಿ ಭಾಗಿಯಾದ ನಾಲ್ವರನ್ನು ಬಂಧಿಸಲಾಗಿದೆ
ನಾಲ್ವರು ಅಧಿಕಾರಿಗಳು ಮತ್ತು ಒಬ್ಬ ಮಹಿಳಾ ಪೇದೆ ಸೆಲ್ಫೋನ್ ಟ್ರ್ಯಾಕ್ ಮಾಡಿ ಆರೋಪಿಗಳ ಪತ್ತೆಗೆ ತೆರಳಿದ್ದರು. ಈ ವೇಳೆ ಅಧಿಕಾರಿಗಳು ನಕಲಿ ಎಂದು ಗ್ರಾಮಸ್ಥರು ಥಳಿಸಿದ್ದಾರೆ. ಅಲ್ಲದೇ ವಾಹನಗಳನ್ನೂ ಧ್ವಂಸಗೊಳಿಸಿದ್ದಾರೆ. ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರು ಆಗಮಿಸಿ ಅಧಿಕಾರಿಗಳನ್ನು ರಕ್ಷಿಸಿದ್ದಾರೆ.