ಲಕ್ನೋ:– UP ಸಿಎಂ ಮುಖ್ಯಮಂತ್ರಿಯ ಕಾರ್ಯದರ್ಶಿ ಹೆಸರಲ್ಲಿ ವಂಚಿಸುತ್ತಿದ್ದ ಖತರ್ನಾಕ್ ಕ್ರಿಮಿನಲ್ ಪೊಲೀಸ್ ಬಲೆಗೆ ಬಿದ್ದಿದ್ದಾನಂ.
ಸಿಎಂ ಕಾರ್ಯದರ್ಶಿಯ ಹೆಸರಿನಲ್ಲಿ ನಕಲಿ ಫೋನ್ ಕರೆಗಳನ್ನು ಮಾಡುವ ಮೂಲಕ ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ವಿವೇಕ್ ಶರ್ಮಾ ಅಲಿಯಾಸ್ ಬಂಟು ಚೌಧರಿಯನ್ನು ಬಸ್ತಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಎಸ್ಟಿಎಫ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸೊಳ್ಳೆಗಳ ಕಾಟ, ಉಪ್ಪು ಕಾರ ಇಲ್ಲದ ಊಟ.. ಜೈಲಿನಲ್ಲಿ ದರ್ಶನ್, ಪವಿತ್ರಾ ವಿಲವಿಲ!
ಕೆಲವು ದಿನಗಳ ಹಿಂದೆ ಬಸ್ತಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿಗೆ ಮೋಸ ಮಾಡುವ ಸಲುವಾಗಿ ಅವರ ಮೊಬೈಲ್ ಫೊನ್ಗೆ ಕರೆ ಮಾಡಿ ತನ್ನನ್ನು ಮುಖ್ಯಮಂತ್ರಿಯ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿರುವುದಾಗಿ ಎಂದು ವಿವೇಕ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಬೈಲ್ ಅಪ್ಲಿಕೇಶನ್ ‘ಟ್ರೂ ಕಾಲರ್’ನಲ್ಲಿ ವಿವೇಕ್ನ ಫೋನ್ ನಂಬರ್ ʼಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ʼ ಎಂದು ಕಾಣಿಸಿಕೊಂಡಿದೆ
ಬಸ್ತಿಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 419 (ವ್ಯಕ್ತಿಗಳಿಗೆ ಮೋಸ ಮಾಡಿದ್ದಕ್ಕೆ ಇರುವ ಶಿಕ್ಷೆ), 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಗೆ ಪ್ರಚೋದನೆ), 384 (ಸುಲಿಗೆ) ಮತ್ತು 507 (ಅನಾಮಧೇಯ ಸಂವಹನದಿಂದ ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಂಚನೆ ಆರೋಪದ ಮೇಲೆ ಅಲಿಗಢ, ಬಲರಾಂಪುರ, ಮಥುರಾ, ಕಾನ್ಪುರ ನಗರ ಮತ್ತು ಹರ್ದೋಯ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಎಸ್ಟಿಎಫ್ ತಿಳಿಸಿದೆ. ಸದ್ಯ ವಿವೇಕ್ನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಇನ್ನಷ್ಟು ಸ್ಫೋಟಕ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ.