ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ನೋಡಲು ಆಪ್ತರು ಮತ್ತು ಕುಟುಂಬದವರು ಬರುತ್ತಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿಹಾಗೂ ಪುತ್ರ ವಿನೀಶ್ ಅವರು ಇಂದು ಜೈಲಿನ ಬಳಿ ಬಂದಿದ್ದರು. ಆದರೆ ಜೈಲಿನ ಮುಂಭಾಗದಲ್ಲಿ ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿದ ಕೂಡಲೇ ಅವರು ವಾಪಸ್ ತೆರಳಿದ್ದಾರೆ.
Rice Water: ಅನ್ನ ಬಸಿದ ಗಂಜಿ ನೀರು ಗುಟ್ಟು ತಿಳಿದ್ರೆ ಇನ್ಯಾವತ್ತು ಬಿಸಾಕುವುದಿಲ್ಲ..!
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಭೀಕರ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದು, ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗುತ್ತಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿಚಾರಣೆ ತೀವ್ರವಾದಂತೆಲ್ಲ ಅನೇಕ ಶಾಕಿಂಗ್ ವಿಚಾರಗಳು ಹೊರಬರುತ್ತಿವೆ.