ರಾಮನಗರ: ಇಳಿವಯಸ್ಸಲ್ಲೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ನಮ್ಮನ್ನು ಮುಗಿಸಲು ಏನೇನೋ ಕೆಲಸ ಮಾಡ್ತಾರೆ. ಇಳಿವಯಸ್ಸಿನಲ್ಲಿಯೂ ದೇವೇಗೌಡರಿಗೆ ಕೊಡಬಾರದ ನೋವು ಕೊಡ್ತಿದ್ದಾರೆ. ಮಕ್ಕಳು ತಪ್ಪು ಮಾಡಿದ್ರೆ ದೊಡ್ಡವರು ಏನು ಮಾಡ್ತಾರೆ? ನಿಮ್ಮ ಮನೆಯಲ್ಲಿ ಮಕ್ಕಳಿಲ್ವಾ? ಇದರಲ್ಲಿ ದೇವೇಗೌಡರಿಗೆ ಪ್ರಶ್ನೆ ಮಾಡ್ತೀರಿ.
ಅವನ್ಯಾರೋ ಮಾಧ್ಯಮದವನು ದೇವೇಗೌಡರಿಗೆ ಏಕವಚನದಲ್ಲಿ ಮಾತನಾಡ್ತಾನೆ ಎಂದು ಅವರು ಹರಿಹಾಯ್ದಿದ್ದಾರೆ. ಈ ಮೂಲಕ ಭಾಷಣದಲ್ಲಿ ಪರೋಕ್ಷವಾಗಿ ಸೂರಜ್ ರೇವಣ್ಣ ಅವರ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಇದ್ಯಾವುದಕ್ಕೂ ನಾವು ಕುಗ್ಗಲ್ಲ. ನಮ್ಮ ಅಧಿಕಾರಿಗಳು ಗುಲಾಮರಾಗಿ ಕೆಲಸ ಮಾಡಲು ಇತಿಮಿತಿ ಇದೆ. ನಾವೇನು ನಾಳೆಯೇ ರಾಜಕೀಯ ನಿವೃತ್ತಿ ಹೊಂದಲ್ಲ. ನನ್ನ ಕೈಯಲ್ಲಿ ಅಧಿಕಾರಿಗಳು ಸಿಕ್ಕಿ ಹಾಕಿಕೊಳ್ಳುವುದಿಲ್ವಾ?
Rice Water: ಅನ್ನ ಬಸಿದ ಗಂಜಿ ನೀರು ಗುಟ್ಟು ತಿಳಿದ್ರೆ ಇನ್ಯಾವತ್ತು ಬಿಸಾಕುವುದಿಲ್ಲ..!
ನಾನು ಎರಡು ಬಾರಿ ಸಿಎಂ ಆಗಿ ಕೆಲಸ ಮಾಡಿದ್ದೇನೆ. ಇವತ್ತಲ್ಲ ನಾಳೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ದುರಹಂಕಾರದಲ್ಲೇ ಈ ಮಾತನ್ನ ಹೇಳುತ್ತಿದ್ದೇನೆ ಎಂದುಕೊಳ್ಳಿ. ಈ ಇಬ್ಬರು ಮಹಾನುಭಾವರು ಏನು ಮಾಡ್ತಿದ್ದಾರೆ ಗೊತ್ತಿದೆ. ಅಧಿಕಾರಿಗಳು ಈ ಗುಲಾಮತನ ಬಿಟ್ಟು, ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ರಾಜ್ಯದ ಅಧಿಕಾರಿಗಳಿಗೆ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.a