ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಪರವಾಗಿ ಸಂತ್ರಸನ ವಿರುದ್ಧ ದೂರು ನೀಡಿದ್ದ ದೂರುದಾರನೇ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ಎಂಎಲ್ಸಿ ಅವರ ಆಪ್ತ ಶಿವಕುಮಾರ್ ಜೂನ್ 21ರಂದು ದೂರು ನೀಡಿದ್ದರು.
Rice Water: ಅನ್ನ ಬಸಿದ ಗಂಜಿ ನೀರು ಗುಟ್ಟು ತಿಳಿದ್ರೆ ಇನ್ಯಾವತ್ತು ಬಿಸಾಕುವುದಿಲ್ಲ..!
ಶಿವಕುಮಾರ್ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್ ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.