ಬೆಂಗಳೂರು: ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು, ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರಿಂದು ಬೃಹತ್ ಪ್ರತಿಭಟನೆ ನಡೆಸಿದರು.
ರೈತರ ಒತ್ತಾಯಗಳು
1) ಬೆಂಗಳೂರು ದಕ್ಷಿಣ ತಾಲ್ಲೂಕಿನ 30 ಗ್ರಾಮಗಳಲ್ಲಿ ದಶಕಗಳಿಂದ ಉಳುಮೆ ಬಂದಿರುವ ಸಾಗುವಳಿ ಜಮೀನುಗಳನ್ನು ಪೋಡಿ,ದುರಸ್ತಿ ಮಾಡಿಕೊಟ್ಟು ರೈತರಿಗೆ ತಮ್ಮ ಜಮೀನುಗಳ ಮೇಲೆ ಸಂಪೂರ್ಣ ಹಕ್ಕನ್ನು ಕೊಡಬೇಕು.
2) ಸೋಮನಹಳ್ಳಿ ಬಳಿ ನಿರ್ಮಿಸುತ್ತಿರುವ ಟೋಲ್ ನಲ್ಲಿ ಸ್ಥಳೀಯ ವಾಹನ ಸವಾರರಿಗೆ ಸರ್ವಿಸ್ ರಸ್ತೆ ನೀಡಬೇಕು ಅಥವಾ ಟೋಲನ್ನು ಕಗ್ಗಲೀಪುರ ಬೈಪಾಸ್ ಗೆ ಸ್ಥಳಾಂತರಿಸಬೇಕು
3) ಕಗ್ಗಲಿಪುರ, ಸಾಲುಹುಣಸೆ ಉದಿಪಾಳ್ಯ ಬೈಪಾಸ್ ರಸ್ತೆ ನಿರ್ಮಿಸಿ ಸ್ಥಳೀಯರಿಗೆ ಉಂಟಾಗುತ್ತಿರುವ ವಾಹನ ದಟ್ಟಣೆ ಸಮಸ್ಯೆಯನ್ನು ತಪ್ಪಿಸುವುದು
4) ಅರಣ್ಯ ಇಲಾಖೆ ರೈತರನ್ನು ಒಕ್ಕಲೆಸಬೇಕೆಂದು ನೀಡುತ್ತಿರುವ ಕಿರುಕುಳದಿಂದ ಮುಕ್ತಿ ಕೂಡಿಸಬೇಕು
5) 45 ವರ್ಷಗಳಿಂದ ಸಾಕಮ್ಮ ಬಡಾವಣೆಯಲ್ಲಿ ವಾಸಿಸುತ್ತಿರುವ ಗುಡಿಸಲು ನಿವಾಸಿಗಳಿಗೆ ಮನೆ ಭಾಗ್ಯ ಕಲ್ಪಿಸಬೇಕು.
6)ಪಟ್ಟರೆಡ್ಡಿ ಪಾಳ್ಯ ಗ್ರಾಮಕ್ಕೆ ಪರ್ಯಾಯ ರಸ್ತೆ ನಿರ್ಮಿಸಬೇಕು.
7) 7 ತಿಂಗಳಿನಿಂದ ತಡೆ ಹಿಡಿದಿರುವ ಹಾಲು ಉತ್ಪಾದಕ ರೈತರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
8) ಸ್ಥಳೀಯವಾಗಿ ಉದ್ಭವಿಸಿರುವ ಸೇತುವೆ ರಸ್ತೆಗಳನ್ನು ನಿರ್ಮಿಸಿ ಕೊಡುಬೇಕು.
9)ಹೆಚ್ಚಿನ ಮಳೆಯಾದಾಗ ನದಿಗಳಿಗೆ ಹರಿದು ಹೋಗುತ್ತಿರುವ ಅಪಾರ ಪ್ರಮಾಣದ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚಿಸಬೇಕು.