ಬೆಂಗಳೂರು:-ಬೇರೆಯವರ ಮೇಲೆ ಗೂಬೆ ಕೂರಿಸುವುದು ದೇವೇಗೌಡರ ಕೆಟ್ಟ ಅಭ್ಯಾಸ ಎಂದು ಡಿಕೆ ಸುರೇಶ್ ವಾಗ್ದಾಳಿ ಮಾಡಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್, ಈ ದೇಶ ನಮ್ಮದು – ಜಮೀರ್..!
ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ಬೇರೆ ಸದಸ್ಯರ ದೃಷ್ಟಿಕೋನಗಳು ಭಿನ್ನವಾಗಿರುತ್ತವೆ. ತಾವು ಕಟಕಟೆಯಲ್ಲಿ ನಿಲ್ಲಬೇಕಾಗಿ ಬಂದ ಸಂದರ್ಭಗಳಲ್ಲೆಲ್ಲ ಬೇರೆಯವರನ್ನು ದೋಷಿಯ ಸ್ಥಾನದಲ್ಲಿ ನಿಲ್ಲಿಸುವುದು, ಅವರ ಮೇಲೆ ಗೂಬೆ ಕೂರಿಸುವುದು ಆ ಕುಟುಂಬಕ್ಕೆ ಅಭ್ಯಾಸವಾಗಿಬಿಟ್ಟಿದೆ ಎಂದು ಸುರೇಶ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಇನ್ನು ಮುದೆ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಓಡಾಡಿಕೊಂಡಿರುತ್ತೇನೆ ಎಂದು ಅವರು ಹೇಳಿದರು.
ಇನ್ನೂ ನೀವ್ಯಾರೂ ಸೂರಜ್ ಬಗ್ಗೆ ಮಾತಾಡಬೇಡಿ, ನಾವು ಮಾತಾಡಿದರೆ ತಪ್ಪಾಗುತ್ತದೆ, ಅದರೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಮತ್ತ್ತು ಅವರೇ ಸೂಕ್ತವಾದ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಸುರೇಶ್ ಹೇಳಿದರು.