ಬೆಂಗಳೂರು:- ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಧಪಟ್ಟಂತೆ ಮೂರನೇ ಬಾರಿ ಸೆಂಟ್ರಲ್ ಜೈಲಿಗೆ ಮಾಜಿ ಸಂಸದ ಪ್ರಜ್ವಲ್ ಬಂದಿದ್ದಾರೆ.
ಬೆಂಗಳೂರಿನಲ್ಲಿ ಪ್ರಬುದ್ಧಾಳ ಕೊಲೆ ಕೇಸ್.. ಪ್ರಕರಣ ಸಿಐಡಿಗೆ ವರ್ಗಾವಣೆ!
ಪ್ರಜ್ವಲ್ ಗ್ಯಾಸ್ಟ್ರಿಕ್ ಮತ್ತು ಬೆನ್ನುನೋವಿನಿಂದ ಬಳಲುತ್ತಿದ್ದು ಚಿಕಿತ್ಸೆಯ ಅವಶ್ಯಕತೆಯಿದೆ ಎಂದು ಅವರ ಪರ ವಕೀಲ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಇದೇ ಮನವಿಯನ್ನು ಜೈಲು ಅಧಿಕಾರಿಗಳಿಗೆ ಸಲ್ಲಿಸುವಂತೆ ನ್ಯಾಯಾಧೀಶರು ವಕೀರಿಗೆ ಸೂಚಿಸಿದ್ದಾರೆ. ಒಂದು ಪಕ್ಷ ಜೈಲು ಅಧಿಕಾರಿಗಳು ಚಿಕಿತ್ಸೆ ಒದಗಿಸಲು ನಿರಾಕರಿಸಿದ್ದೇಯಾದಲ್ಲಿ ತಮಗೆ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಹೇಳಿದ್ದಾರಂತೆ ಎಂದು ತಿಳಿದು ಬಂದಿದೆ.