ಮಂಡ್ಯ: ಪ್ಲೆಕ್ಸ್ ಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಜೊತೆ ಬೇರೆ ಹಲವಾರು ಪ್ರಮುಖ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಫೋಟೋಗಳಿವೆ. ಆದರೆ ಹೆಚ್ ಡಿ ರೇವಣ್ಣನ ಫೋಟೋ ಮಾತ್ರ ಇಲ್ಲ ಹೌದು ಕೇಂದ್ರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾದ ಬಳಿಕ ಮೊದಲ ಬಾರಿಗೆ ಮಂಡ್ಯಗೆ ಆಗಮಿಸುತ್ತಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಇಟ್ಟುಕೊಳ್ಳಲಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯಾದ್ಯಂತ ಪ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಕಟ್ಟಲಾಗಿದೆ.
ಪ್ಲೆಕ್ಸ್ ಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಜೊತೆ ಬೇರೆ ಹಲವಾರು ಪ್ರಮುಖ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಫೋಟೋಗಳಿವೆ. ಆದರೆ ಹೆಚ್ ಡಿ ರೇವಣ್ಣನ ಫೋಟೋ ಮಾತ್ರ ಇಲ್ಲ. ರೇವಣ್ಣ ಕುಟುಂಬದಲ್ಲಿ ಏನು ನಡೆಯುತ್ತಿದೆ ಅಂತ ಎಲ್ಲರಿಗೂ ಗೊತ್ತಿದೆ.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಅವರ ಇಬ್ಬರು ಮಕ್ಕಳು ಜೈಲಲ್ಲಿದ್ದರೆ ಖುದ್ದು ರೇವಣ್ಣ ಮತ್ತು ಅವರ ಪತ್ನಿ ಭವಾನಿ ಜಾಮೀನು ಪಡೆದು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಂಡಿದ್ದಾರೆ. ಆಫ್ ಕೋರ್ಸ್, ರೇವಣ್ಣ ಸುಮಾರು ಒಂದು ವಾರ ಕಾಲ ಜೈಲಲ್ಲಿದ್ದಿದ್ದು ಗೊತ್ತಿರದ ವಿಷಯವೇನಲ್ಲ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಉಂಟಾಗಬಹುದಾದ ಮುಜುಗುರದಿಂದ ತಪ್ಪಿಸಿಕೊಳ್ಳಲು ಜೆಡಿಎಸ್ ಮುಖಂಡರು ರೇವಣ್ಣ ಮತ್ತು ಅವರ ಕುಟುಂಬದ ಸದಸ್ಯರನ್ನು ಫ್ಲೆಕ್ಸ್ ಗಳಿಂದ ದೂರವಿಟ್ಟಿದ್ದಾರೆ.