ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ʼಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಉದಯನಿಧಿ ಸ್ಟಾಲಿನ್ ಅವರಿಗೆ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು, ಹಾಗೂ ವಿಚಾರಣೆಯನ್ನು ಮುಂದೂಡುವಂತೆ ವಕೀಲರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಆಗಸ್ಟ್ 8ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಉದಯನಿಧಿ ಅವರಿಗೆ 1 ಲಕ್ಷ ಬಾಂಡ್ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.