ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.
ಸಭೆಯಲ್ಲಿ ಕೃಷಿ ನವೋದ್ಯಮಗಳ ಸ್ಥಿತಿಗತಿ, ಅವುಗಳು ಎದುರಿಸುತ್ತಿರುವ ಸವಾಲುಗಳು, ಸಿರಿಧಾನ್ಯ ಆಧಾರಿತ ಉದ್ಯಮಗಳನ್ನು ಬಲ ಪಡಿಸಲು ಅಗತ್ಯ ಇರುವ ಸರ್ಕಾರದ ನೆರವಿನ ಕುರಿತು ಕೃಷಿ ಸಚಿವರು ಸ್ಟಾರ್ಟಪ್ ಉದ್ಯಮಿಗಳ ಅಭಿಪ್ರಾಯ ಆಲಿಸಿದರು. ಸಿರಿ ಧಾನ್ಯ ಬೇಡಿಕೆ ಹೆಚ್ಚಿದ್ದರೂ ಪೂರೈಕೆ ಕೊರತೆ ಇದೆ. ಹಾಗಾಗಿ ಪ್ರೋತ್ಸಾಹ ಧನ ಯೋಜನೆ ಮುಂದುವರೆಸುವ ಜೊತೆಗೆ ಉತ್ಪಾದನೆಯನ್ನು 30 ಸಾವಿರದಿಂದ 50 ಸಾವಿರ ಹೆಕ್ಟೇರ್ ಗೆ ಏರಿಕೆ ಮಾಡಲು ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ರೈತರೊಂದಿಗೆ ಉದ್ದಿಮೆದಾರರ ನೇರ ಖರೀದಿ ವ್ಯವಸ್ಥೆ ಮಾಡಿಸುವ ಬಗ್ಗೆ ಚಿಂತನೆ ನಡೆಸಿ, ರಾಜ್ಯಾದ್ಯಂತ ಇರುವ ಎಫ್ .ಪಿ.ಓ ಗಳ ಜೊತೆ ಉದ್ದಿಮೆದರರ ಸಂಪರ್ಕ ಕಲ್ಪಿಸಿ ಎಂದು ಅವರು ಹೇಳಿದರು. ಪ್ರತಿ ಜಿಲ್ಲೆಯಲ್ಲೂ 2 ದಿನಗಳ ಸಿರಿಧಾನ್ಯ ಮೇಳ ಏರ್ಪಡಿಸುವ ಜೊತೆಗೆ ವಿದೇಶದಲ್ಲಿ ನಡೆಯುವ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಗಳಲ್ಲಿ ರಾಜ್ಯದಿಂದ ಮಳಿಗೆ ಹಾಕಲು ಸಹ ನೆರವು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು .
![](https://ainlivenews.com/wp-content/uploads/2024/01/Ad-Banner-copy-scaled.jpg)