ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಮಾಸಿಕ ಕೆಡಿಪಿ ಸಭೆಗೆ ಹಾಜರಾಗಲು ಬಂದಿದ್ದ ಎಪಿಎಂಸಿ ಅಧಿಕಾರಿಗಳು ಲಿಫ್ಟ್ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಜಿಲ್ಲಾ ಪಂಚಾಯ್ತಿಯ ಎರಡನೇ ಮಹಡಿಯಲ್ಲಿ ಕೆಡಿಪಿ ಸಭೆ ನಡೆದಿತ್ತು.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಈ ಸಭೆಗೆ ಲಿಫ್ಟ್ ಮೂಲಕ ಬರುತ್ತಿದ್ದ ಎಪಿಎಂಸಿಯ ಇಬ್ಬರು ಮಹಿಳಾ ಅಧಿಕಾರಿಗಳು ಹಾಗೂ ಮೂವರು ಪುರುಷರು ಲಿಫ್ಟ್ನಲ್ಲೇ ಲಾಕ್ ಆಗಿ ಪರದಾಡಿದ್ದಾರೆ. 15 ನಿಮಿಷಗಳ ಕಾಲ ಲಿಫ್ಟ್ನಲ್ಲೇ ಅಧಿಕಾರಿಗಳು ಪರದಾಡಿದ್ದಾರೆ. ಆನಂತರ ಸ್ಥಳಕ್ಕೆ ಲಿಫ್ಟ್ ಮೆಕ್ಯಾನಿಕ್ನ್ನು ಕರೆಯಿಸಿ ಲಿಫ್ಟ್ ಕೆಳಗೆ ಇಳಿಸಲಾಗಿದೆ. ಆ ಮೂಲಕ ಚೇರ್ ಇಟ್ಟು ಮೂವರನ್ನು ಕೆಳಗಡೆ ಇಳಿಸಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಭಾರ ಆಗಿದ್ದರಿಂದ ಲಿಫ್ಟ್ ಲಾಕ್ ಆಗಿತ್ತು. 15 ನಿಮಿಷಗಳ ನಂತರ ಅಧಿಕಾರಿಗಳು ಸಭೆಗೆ ಹಾಜರಾದ ಪ್ರಸಂಗ ನಡೆಯಿತು.
![](https://ainlivenews.com/wp-content/uploads/2024/01/Ad-Banner-copy-scaled.jpg)