ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ಶನಿವಾರ ಆರೋಪಿಗಳನ್ನು ಕೋರ್ಟ್ ವಿಚಾರಣೆ ನಡೆಸಿದ ಬಳಿಕ ದರ್ಶನ್ ಅವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ವೇಳೆ ಆರೋಪಿಗಳಲ್ಲಿ ಕೆಲವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಲಾಗಿತ್ತು.
Pavithra Gowda: ನಟಿಯಾಬೇಕೆನ್ನುವ ಕನಸು ಕಂಡಿದ್ದ ಪವಿತ್ರಾ ಗೌಡ ಲೈಫ್ ಹೇಗಿತ್ತು ಗೊತ್ತಾ..?
ಅದರಂತೆ ಕಾರ್ತಿಕ್, ಕೇಶವಮೂರ್ತಿ, ರವಿಶಂಕರ್ ಮತ್ತು ನಿಖಿಲ್ ನಾಯಕ್ ಆರೋಪಿಗಳನ್ನು ತುಮಕೂರು ಕಾರಾಗೃಹಕ್ಕೆ ಪೊಲೀಸರು ಕರೆದೊಯ್ದರು. ಕೆಎ-50 ಜಿ 0182 ನಂಬರ್ ಬಿಳಿ ಬಣ್ಣದ ಟಿಟಿಯಲ್ಲಿ ಓರ್ವ ಇನ್ಸ್ಪೆಕ್ಟರ್ ಸೇರಿದಂತೆ ಹತ್ತಕ್ಕೂ ಅಧಿಕ ಮಂದಿ ಪೊಲೀಸರ ಎಸ್ಕಾರ್ಟ್ ನಲ್ಲಿ ಆರೋಪಿಗಳನ್ನು ಪೊಲೀಸರು ಕರೆದೊಯ್ದರು.