ಕೊಡಗು:- ಕೊಡಗಿನಲ್ಲಿ ನಿನ್ನೆ ಎಡಬಿಡದೆ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇನ್ನು ಈ ವರ್ಷಧಾರೆ ಇಂದು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ.
ಸಾರ್ವಜನಿಕರ ಕೆಲಸ ಮಾಡದ ಅಧಿಕಾರಿಗಳಿಗೆ ನಾಚಿಕೆ ಆಗಬೇಕು..ಜಿಲ್ಲಾಧಿಕಾರಿ ಕೆ ಜಾನಕಿ ತರಾಟೆ!
ಈ ಹಿನ್ನೆಲೆಯಲ್ಲಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗಿನಲ್ಲಿ ನಾಳೆ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ ಮೇರೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ. ಈಗಾಗಲೇ ದಕ್ಷಿಣ ಕನ್ನಡದಲ್ಲೂ ಸಹ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭರ್ತಿ ಒಂದು ತಿಂಗಳ ಬಳಿಕ ಮುಂಗಾರು ಆರ್ಭಟಿಸಲಾರಂಭಿಸಿದೆ. ವರುಣಾರ್ಭಟದ ಮೊದಲ ದಿನವೇ ನದಿ ತೊರೆಗಳು ಉಕ್ಕಲಾರಂಭಿಸಿವೆ. ಅಲ್ಲಲ್ಲಿ ಮಳೆ ಸಂಬಂಧಿತ ಅನಾಹುತಗಳು ಸಂಭವಿಸುತ್ತಿವೆ. ಭಅಗಮಂಡಲ ತ್ರಿವೇಣಿ ಸಂಗಮ ಜಲಾವೃತವಾಗುತ್ತ ಸಾಗಿದೆ. ಮಡಿಕೇರಿಯಲ್ಲಿ ತಡೆಗೋಡೆ ಇಲ್ಲದೆ ಮುಖ್ಯ ರಸ್ತೆ ರಾಜಕಾಲುವೆಗೆ ಕುಸಿಯುವ ಭಿತಿ ಎದುರಾಗಿದೆ.
ಮಡಿಕೇರಿ ನಗರದ ಹೃದಯ ಭಾಗದಲ್ಲಿಯೇ ಮುಖ್ಯ ರಸ್ತೆಯೊಂದು ಕುಸಿಯುತ್ತಿದೆ. ಮಡಿಕೇರಿಯಿಂದ ಗಾಳಿಬೀಡು, ಕಾಲೂರು ಮೊಣ್ಣಂಗೇರಿ ಗ್ರಾಮಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಎರಡು ವರ್ಷಗಳ ಹಿಮದೆ ಮಳೆಗಾಲದಲ್ಲಿ ಈ ಸರ್ತೆ ಕುಸಿತವಾಗಿತ್ತು. ರಸ್ತೆಯ ಕೆಳಭಾಗದಲ್ಲೇ ರಾಜಕಾಲುವೆ ಹರಿಯುತ್ತದೆ. ರಸ್ತೆಗೆ ಎರಡು ವರ್ಷಗಳ ಕಾಲ ತಡೆಗೋಡೆ ನಿರ್ಮಿಸಿದ ಜಿಲ್ಲಾಡಳಿತ ಇದೀಗ ಮಳೆಗಾಲ ಶುರುವಾಗುತ್ತಲೇ ಒಂದು ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದೆ. ತಡೆಗೋಡೆಗೆಂದು ರಸ್ತೆಯ ಕೆಳಭಾಗದ ಹಿಟಾಚಿಯಿಂದ ಮಣ್ಣು ಕೊರೆದಿದೆ. ಇದೀಗ ರಸ್ತೆ ಕುಸಿಯಲಾರಂಭಿಸಿದೆ.