ಗದಗ: ರಾಜ್ಯದೆಲ್ಲೆಡೆ ಸಂಗೀತ ಜಾತ್ರೆ ಅಂತಾನೇ ಪ್ರಖ್ಯಾತಿ ಹೊಂದಿರೋ ಗದುಗಿನ ಪರಮಪೂಜ್ಯ ಗಾನಯೋಗಿ ಶಿವಯೋಗಿ ಲಿಂ. ಪಂ. ಪಂಚಾಕ್ಷರ ಗವಾಯಿಗಳವರ 80 ನೇ ಹಾಗೂ ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ 14 ನೇ ಪುಣ್ಯಸ್ಮರಣೋತ್ಸವ ಉಭಯ ಗುರುಗಳ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವವು ಅಪಾರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
ಜಾತ್ರೆಯ ಅಂಗವಾಗಿ ಒಂದು ವಾರಗಳ ಕಾಲ ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ವೇದಿಕೆ ಹಾಗೂ ನಿರಂತರ ಸಂಗೀತ ಕಾರ್ಯಕ್ರಮಗಳು ಜರುಗಿದ್ವು. ನೆನ್ನೆ ಸಂಜೆ ಮಹಾ ರಥೋತ್ಸವ ಕಾರ್ಯಕ್ರಮವು ಅಧ್ದೂರಿಯಾಗಿ ಜರುಗಿತು.
ನಂದಿ ಕೋಲು, ವಿವಿಧ ವಾದ್ಯಮೇಳಗಳು ಜಾತ್ರೆಗೆ ಮೆರಗು ತಂದ್ವು. ಗದಗ ಜಿಲ್ಲೆ, ರಾಜ್ಯ ಸೇರಿದಂತೆ ಹೊರ ರಾಜ್ಯಗಳಾದ ಆಂಧ್ರಪ್ರದೇಶದ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಉಭಯ ಗುರುಗಳ ಕೃಪೆಗೆ ಪಾತ್ರರಾದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣ ಎಸೆದು ತಮ್ಮ ಇಷ್ಟಾರ್ಥ ಸಿಧ್ಧಿಗಾಗಿ ಭಕ್ತಿಪೂರ್ವಕವಾಗಿ ಬೇಡಿಕೊಂಡ್ರು.