ಧಾರವಾಡ: ಈಗ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ಈಗ ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಲೋಕಸಭೆ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ವಿಚಾರದ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು,
ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದು ಖುಷಿ ಇದೆ. ಇಂಡಿ ಒಕ್ಕೂಟಕ್ಕೆ ಧನ್ಯವಾದ ಹೇಳುವೆ. ರಾಹುಲ್ ಗಾಂಧಿ ಸಮರ್ಥರಿದ್ದಾರೆ. ಹದಿನೈದು ವರ್ಷ ಸುದ್ದಿಗೋಷ್ಠಿ ಮಾಡದೇ ದೇಶ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿ ನಡೆಸಲು ಆಗಲ್ವಾ ಎಂದು ಪ್ರಶ್ನಿಸಿದರು.
ದರ್ಶನ್ ಜೊತೆ ಈ ಸ್ಟಾರ್ ನಟಿಗೂ ಇತ್ತಾ ಸಂಬಂಧ..? ಸ್ಫೊಟಕ ಮಾಹಿತಿ ಬಿಚ್ಚಿಟ್ಟ ಓಂ ಪ್ರಕಾಶ್ ರಾವ್
ವಯನಾಡ್ನಲ್ಲಿ ಪ್ರಿಯಂಕಾ ಗಾಂಧಿ ಸ್ಪರ್ಧಿಸಿ, ಗೆಲ್ಲುತ್ತಾರೆ. ಅವರು ಸಂಸತ್ಗೆ ಬಂದರೆ ನಮಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದರು. ಡಿಕೆಶಿ ಸಿಎಂ ಆಗಲಿ ಎಂದು ಚನ್ನಗಿರಿ ಶಾಸಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದರು.