ಬಾಗಲಕೋಟ- ಮಹಲಿಂಗಪುರ ಗರ್ಭಪಾತ ಪ್ರಕರಣಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Murder Case: ತನ್ನ ಸೆಲೆಬ್ರಿಟಿಗಳಿಗೆ ದರ್ಶನ್ ವಿಶೇಷ ಮನವಿ… ಪಾಲಿಸ್ತಾರಾ ಫ್ಯಾನ್ಸ್..!
ಮುಧೋಳ ತಾಲೂಕಿಗೆ ತಾಯಿ-ಮಗು ಆಸ್ಪತ್ರೆ ಮಂಜೂರಾಗಿದ್ದು, ಆಸ್ಪತ್ರೆ ಕಾರ್ಯಾರಂಭಕ್ಕೆ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಬೆಳೆಯುತ್ತಿರುವ ಮುಧೋಳ ನಗರಕ್ಕೆ ಅಗತ್ಯವಿರುವ ತಾಯಿ-ಮಗು ಆಸ್ಪತ್ರೆಗೆ ಆರಂಭಕ್ಕೆ ಹೆಚ್ಚಿನ ಒತ್ತಡವಿತ್ತು, ಇದೀಗ ಆಸ್ಪತ್ರೆ ಮಂಜೂರಾಗಿದ್ದು ಕೆಲವೇ ದಿನಗಳಲ್ಲಿ ಆಸ್ಪತ್ರೆ ಕಾರ್ಯಾರಂಭಗೊಳ್ಳಲಿದೆ ಎಂದರು.
ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಮುಂಬರುವ ದಿನಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆಸ್ಪತ್ರೆಯಲ್ಲಿ ಸುಸಜ್ಜಿತ ಆಕ್ಸಿಜನ್ ಘಟಕವಿದ್ದು ಅಗತ್ಯ ತಜ್ಞರ ತಂಡವಿರದ ಕಾರಣ ಹಾಳಾಗುತ್ತಿದೆ. ಮುಂದಿನ ದಿನಗಳಲ್ಲಿ ಅಗತ್ಯ ತಜ್ಞರ ತಂಡವನ್ನು ನೇಮಿಸಿ ಆಕ್ಸಿಜನ್ ಬಳಕೆಗೆ ಕ್ರಮವಹಿಸಲಾಗುವುದು. ಇದರಿಂದ ಹೊರಗಡೆಯಿಂದ ಆಕ್ಸಿಜನ್ ಖರೀದಿಸುವ ಆರ್ಥಿಕ ಹೊರೆ ತಗ್ಗಿಸಲಾಗುವುದು ಎಂದರು.
ಆಸ್ಪತ್ರೆಯಲ್ಲಿನ ಸ್ವಚ್ಛತೆ ಕಂಡು ಪ್ರಶಂಸೆ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಯನ್ನು ಒದಗಿಸುವಂತೆ ಸಿಬ್ಬಂದಿಗೆ ಸೂಚಿಸಿದರು.