ಹುಬ್ಬಳ್ಳಿ: ಹಾವೇರಿ ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.
ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ.
ʼʼಚೆಂಡು ಹೂʼʼ ಪೂಜೆಗಷ್ಟೇ ಅಲ್ಲ, ನಿಮ್ಮ ಮುಖದ ಸೌಂದರ್ಯಕ್ಕೂ ಉಪಯೋಗ..! ಹೇಗೆ ಗೊತ್ತಾ..?
ತ್ವರಿತ ಪರಿಹಾರ, ಸೂಕ್ತ ಚಿಕಿತ್ಸೆಗೆ ಮನವಿ: ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು. ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.