ಬೆಂಗಳೂರು:- ಜೂನ್ 30 ರವರೆಗೆ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀವು ಬೇಗ ಸಣ್ಣ ಆಗಬೇಕಾ?.. ಹಾಗಿದ್ರೆ ನಿತ್ಯ ಇದನ್ನು ಸೇವಿಸಿ!
ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇತ್ತ ಚಿಕ್ಕಮಗಳೂರು ಜಿಲ್ಲೆಯಲ್ಲೂ ವರುಣನ ಅಬ್ಬರ ಮುಂದುವರೆದಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜೋಗ ಜಲಪಾತಕ್ಕೆ ಜೀವಕಳೆ ಬಂದಿದೆ.
ಬೆಂಗಳೂರಲ್ಲಿ ಜೂನ್ 30ರವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸದ್ಯ ನಗರದಲ್ಲಿ ಎಲ್ಲೆಡೆ ಮೋಡ ಕವಿದ ವಾತಾವರಣ ಇದೆ. ಇದೇ ರೀತಿ ಮುಂದಿನ ಎರಡು ದಿನಗಳ ಕಾಲ ವಾತಾವರಣ ಇರುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞರು ಮಾಹಿತಿ ನೀಡಿದ್ದಾರೆ.