ನವದೆಹಲಿ: ಭಾರೀ ಮಳೆಗೆ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣ ಮೇಲ್ಛಾವಣಿ ಕುಸಿದು ಕ್ಯಾಬ್ ಡ್ರೈವರ್ ಓರ್ವ ಮೃತಪಟ್ಟಿದ್ದು, 7 ಜನರಿಗೆ ಗಾಯಗಳಾಗಿವೆ. ಈ ಘಟನೆ ಸಂಬಂಧ ಬಿಜೆಪಿ ಕಾಂಗ್ರೆಸ್ ಮಧ್ಯೆ ಕೆಸರೆರಚಾಟ ಆರಂಭವಾದ ಬೆನ್ನಲ್ಲೇ ಮೂಲಸೌಕರ್ಯ ಕಂಪನಿ ಎಲ್ ಆಂಡ್ ಟಿ ಸ್ಪಷ್ಟನೆ ನೀಡಿದೆ.
ಸ್ಪಷ್ಟನೆಯಲ್ಲಿ ಏನಿದೆ?
ಕುಸಿದ ರಚನೆಯನ್ನು L&T ನಿರ್ಮಿಸಿಲ್ಲ ಅಥವಾ ಅದರ ನಿರ್ವಹಣೆಗೆ ನಾವು ಜವಾಬ್ದಾರರಾಗಿರುವುದಿಲ್ಲ ಎಂದು ನಾವು ಈ ಮೂಲಕ ಸ್ಪಷ್ಟಪಡಿಸಲು ಬಯಸುತ್ತೇವೆ. ಕುಸಿದು ಬಿದ್ದ ಭಾಗವನ್ನು ಮತ್ತೊಂದು ಕಂಪನಿಯು 2009 ರಲ್ಲಿ ನಿರ್ಮಿಸಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Health Tips: ಪಾಲಕ್ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ.! ತೂಕ ಇಳಿಸಲು ಕುಡಿಯಲೇಬೇಕು ಈ ಜ್ಯೂಸ್
ದೆಹಲಿ ಇಂಟರ್ನ್ಯಾಶನಲ್ ಏರ್ಪೋರ್ಟ್ ಲಿಮಿಟೆಡ್ನ (DIAL) ಕೋರಿಕೆಯ ಮೇರೆಗೆ, L&T 2019 ರಲ್ಲಿ ಟರ್ಮಿನಲ್ 1ರ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಿತು. ಟರ್ಮಿನಲ್ ವಿಸ್ತೃತ ಭಾಗದಿಂದ ಸರಿಸುಮಾರು 110 ಮೀಟರ್ ದೂರದಲ್ಲಿ ಕುಸಿತವು ಸಂಭವಿಸಿದೆ. ಹೊಸದಾಗಿ ನಿರ್ಮಾಣದ ವಿಸ್ತೃತ ಭಾಗದ ಮೇಲೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಿದೆ.
https://x.com/larsentoubro/status/1806647158101151755?ref_src=twsrc%5Etfw%7Ctwcamp%5Etweetembed%7Ctwterm%5E1806647158101151755%7Ctwgr%5E5ccd5f2dca034e037243fa36d2f3c247683e6fe6%7Ctwcon%5Es1_&ref_url=https%3A%2F%2Fpublictv.in%2Fdelhi-airport-terminal-1-roof-collapse-l-and-t-issues-clarification%2F
ಘಟನಾ ಸ್ಥಳಕ್ಕೆ ನಾಗರಿಕ ವಿಮಾನ ಸಚಿವ ರಾಮ್ಮೋಹನ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈಜ್ಞಾನಿಕ ಕಾರಣ ಹುಡುಕಲು ಸೂಚಿಸಿದ್ದೇನೆ. ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆಗೆ ನಿರ್ದೇಶಿಸಿದ್ದೇನೆ. ಮೃತನ ಕುಟುಂಬಕ್ಕೆ 20 ಲಕ್ಷ ರೂ. ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)