ಹುಬ್ಬಳ್ಳಿ:- ಹೆಚ್ಚುವರಿ DCM ಆಯ್ಕೆ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.
ಹೆಚ್ಚುವರಿ ಡಿಸಿಎಂಗಳ ಕೂಗು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಸ್ವಾಮೀಜಿಗಳು ಮತ್ತು ಮಠಾಧೀಶರು ಸಿಎಂ ಬದಲಾವಣೆ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್,
ಸ್ವಾಮೀಜಿಗಳು ಯಾಕೆ ಸಿಎಂ ಬದಲಾವಣೆ ಬಗ್ಗೆ ಮಾತಾಡುತ್ತಿದ್ದಾರೋ ಗೊತ್ತಿಲ್ಲ, ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಲಾರೆ, ಅದರೆ ಖುದ್ದು ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿರುವ ಹಾಗೆ ಅವರು ಪ್ರಜಾತಂತ್ರ ವ್ಯವಸ್ಥೆಯ ಆಧಾರದಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಹೈಕಮಾಂಡ್ ನಿಂದ ನಿಯುಕ್ತರಾಗಿರುವ ಮುಖ್ಯಮಂತ್ರಿಯಾಗಿದ್ದಾರೆ ಎಂದು ಲಾಡ್ ಹೇಳಿದರು.
ಬಿಜೆಪಿಯವರಿಗೆ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ವಿಷಯದಲ್ಲಿ ಮಾತಾಡುವ ಹಕ್ಕಿಲ್ಲ, ಯಾಕೆಂದರೆ ಅವರ ಅಧಿಕಾರಾವಧಿಯಲ್ಲಿ ಎಷ್ಟು ಡಿಸಿಎಂಗಳಿದ್ದರು ಅನ್ನೋದು ನಮಗೆ ಗೊತ್ತಿದೆ, ಕಾಂಗ್ರೆಸ್ ಶಾಸಕರು ಮಂತ್ರಿಗಳು ಇನ್ನೂ ಡಿಸಿಎಂಗಳು ಬೇಕು ಎಂದು ಕೇಳುವ ಹಕ್ಕು ಹೊಂದಿದ್ದಾರೆ ಎಂದು ಲಾಡ್ ಹೇಳಿದರು.