ಭಾರತ ತಂಡವು ಸೌತ್ ಆಫ್ರಿಕಾವ ಹೀನಾಯ ಸೋಲಿಸುವ ಮೂಲಕ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡೆಗೇರಿಸಿಕೊಂಡಿದೆ. ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 7 ರನ್ ಗಳ ಜಯ ಸಾಧಿಸಿದೆ.
PM Modi: T20 ವಿಶ್ವಕಪ್ ಗೆದ್ದ ಭಾರತ.. ಟೀಮ್ ಇಂಡಿಯಾ ಅಭಿನಂದಿಸಿದ PM ಮೋದಿ..!
ಟೀಮ್ ಇಂಡಿಯಾ ಗೆದ್ದ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಅಭಿಮಾನಿಗಳಿಂದ ಸುನಾಮಿ ಅಲೆ ಎದ್ದಿದೆ.
ಇದರ ಬೆನ್ನಲ್ಲೇ CM ಸಿದ್ದರಾಮಯ್ಯ ಅವರು ಕೂಡ ಚಾಂಪಿಯನ್ ಟೀಮ್ ಇಂಡಿಯಾಗೆ ಶುಭ ಕೋರಿದ್ದಾರೆ. ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ.
ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ ಎಂದು ತಿಳಿಸಿದ್ದಾರೆ.
ಅದರಂತೆ HDK ಟ್ವೀಟ್ ಮಾಡಿ ಅಸಾಧಾರಣ ಗೆಲುವು! ???????? T20 ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ರೋಚಕ ಜಯ ಸಾಧಿಸಿದ್ದಕ್ಕಾಗಿ ಅಭಿನಂದನೆಗಳು.
ಎಲ್ಲಾ ಭಾರತೀಯರ ಪರವಾಗಿ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅಂತಿಮ ಪಂದ್ಯ, ಅದರ ಹಲವು ರೋಚಕ ತಿರುವುಗಳು ಎಂದು ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)