ಚಿತ್ರದುರ್ಗ: ‘ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಿದಂತೆ 5300 ಕೋಟಿ ರೂ. ಶೀಘ್ರವೇ ಬಿಡುಗಡೆಯಾಗಲಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ’ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯದ ನೀರಾವರಿ ಇಲಾಖೆ ಅಧಿಕಾರಿಗಳಿಂದ ವರದಿ ಪಡೆದು ಸಂಪೂರ್ಣ ಮಾಹಿತಿ ಒದಗಿಸಿದರೆ ಹಣ ಬಿಡುಗಡೆಯಾಗಲಿದೆ ಎಂದು ದೆಹಲಿಯ ಸಂಸದರ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರ ಗಮನ ಹರಿಸುವಂತೆ ಆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಯಿತು,’ ಎಂದರು.
BREAKING.. ICSE, CBSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
‘ಚಿತ್ರದುರ್ಗ ರೈಲು ನಿಲ್ದಾಣ ಮಾರ್ಗವಾಗಿ ನಾನಾ ರೈಲುಗಳು ಸಂಚರಿಸುತ್ತಿದ್ದು, ಮತ್ತಷ್ಟು ರೈಲುಗಳ ನಿಲುಗಡೆಯಾಗಬೇಕು ಎಂದು ಪ್ರಯಾಣಿಕರು ಮನವಿ ಮೇರೆಗೆ ನಾನಾ ಕಡೆ ಪ್ರಯಾಣ ಬೆಳೆಸುವ ರೈಲುಗಳನ್ನು ನಿಲ್ಲಿಸುವಂತೆ ಕೇಂದ್ರ ರೈಲ್ವೆ ಸಚಿವರು ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಅವರಲ್ಲಿ ಮನವಿ ಮಾಡಲಾಗಿದೆ.
ಇನ್ನೂ ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಸಿಎಂ ಕುರ್ಚಿಗಾಗಿ ಕಾಂಗ್ರೆಸಿಗರು ಗುಂಪುಗಳಾಗಿ ಬಡಿದಾಡುತ್ತಿದ್ದಾರೆ. ರಾಜ್ಯದಲ್ಲಿಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ನಿಗಮಗಳಲ್ಲಿ ಹಣದ ಅವ್ಯವಹಾರ ಹೆಚ್ಚಾಗಿದೆ. ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಜಾತಿವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ‘ನಮ್ಮ ಜಾತಿಯವರು ಸಿಎಂ ಆಗಬೇಕು’ ಎಂದು ಸ್ವಾಮೀಜಿಗಳೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಅರ್ಹತೆ ಮತ್ತು ದಕ್ಷತೆ ಇದ್ದ ವ್ಯಕ್ತಿ ಸಿಎಂ ಆಗುವುದು ಅಗತ್ಯ. ಸಿಎಂ ಖುರ್ಚಿ ಮಾರಾಟದ ವಸ್ತುವಲ್ಲ ಎಂದು ಹೇಳಿದರು.