ಕಲಬುರಗಿ: ಡಿಕೆ ಶಿವಕುಮಾರ್ಗೆ ಅಧಿಕಾರ ಹಸ್ತಾಂತರಿಸಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ನಿನ್ನೆ ಶ್ರೀಶೈಲ ಶ್ರೀಗಳು, ಇಂದು ರಂಭಾಪುರಿ ಶ್ರೀಗಳು ಲಿಂಗಾಯತ ಸಿಎಂ ದಾಳ ಉರುಳಿಸಿದ್ದಾರೆ.
ರಾಜ್ಯದಲ್ಲಿ ಒಂದು ವೇಳೆ ಸಿಎಂ ಸ್ಥಾನ ಬದಲಾವಣೆ ಸನ್ನಿವೇಶ ಬಂದರೆ ವೀರಶೈವ ಲಿಂಗಾಯತ ಸಮಾಜಕ್ಕೆ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ನೀಡಬೇಕೆಂದು ಬಾಳೆ ಹೊನ್ನೂರು ರಂಭಾಪುರಿ ಪ್ರಸನ್ನ ರೇಣುಕ ಡಾ.ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Consuming Milk After Eating Fish: ಮೀನು ತಿಂದ್ಮೇಲೆ ತಪ್ಪಿಯೂ ಹಾಲು ಕುಡಿಯಬೇಡಿ..! ಯಾಕೆ ಗೊತ್ತಾ..?
ಒಂದು ವೇಳೆ ಸಿಎಂ ಸ್ಥಾನ ಲಿಂಗಾಯತರಿಗೆ ನೀಡಲು ಆಗದೇ ಇದ್ದರೆ ಡಿಸಿಎಂ ಸ್ಥಾನವಾದರೂ ನೀಡಬೇಕು. ಸದ್ಯ ಸರ್ಕಾರದಲ್ಲಿ ವೀರಶೈವ ಲಿಂಗಾಯತರಿಗೆ ಒಳ್ಳೆಯ ಸಚಿವ ಸ್ಥಾನಗಳನ್ನು ನೀಡಿಲ್ಲ. ಸಿಎಂ ಅವರು ಕೆಲವೇ ಸಮುದಾಯದ ಜನರಿಗೆ ತುಷ್ಟೀಕರಣ ಮಾಡದೇ ಎಲ್ಲರನ್ನು ಸಮಾನಾಗಿ ಕಾಣಬೇಕಾಗಿದೆ ಎಂದರು. ಕಾಂಗ್ರೆಸ್ನಲ್ಲಿನ ಕೆಲವು ಹಗರಣ,
ಬೆಲೆ ಏರಿಕೆಯಿಂದ ಜನರಿಂದ ಸರ್ಕಾರ ಸುಲಿಗೆ ಹೆಚ್ಚಾಗಿ ಮಾಡುತ್ತಿದೆ. ಇನ್ನು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಣ ಇಲ್ಲ ಅಂತಾ ಹೇಳುತ್ತಿದ್ದಾರೆ. ಸರ್ಕಾರ ಜನರನ್ನ ದುಡಿಯುವಂತೆ ಮಾಡಬೇಕು ಸೋಮಾರಿತನ ಬರುವಂತೆ ಮಾಡಬಾರದು, ಪಕ್ಷದ ಜನಪ್ರಿಯರತೆ ಹೆಚ್ವಿಸಿಕೊಳ್ಳಲು ಅಗ್ಗದ ಪ್ರಚಾರ ಮಾಡಿ ಗ್ಯಾರಂಟಿಗಳಿಂದ ಹೊಡೆತ ಬಿದ್ದಿದೆ ಅಂತಾ ಗ್ಯಾರಂಟಿ ಯೋಜನೆ ವಿರುದ್ಧ ಸಹ ರಂಭಾಪುರಿ ಶ್ರೀ ಆಕ್ರೋಶ ವ್ಯಕ್ತಪಡಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)