ನವದೆಹಲಿ: ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಟೀಂ ಇಂಡಿಯಾಕ್ಕೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶುಭಕೋರಿದ್ದಾರೆ. ‘ಹುಟ್ಟುಹಬ್ಬಕ್ಕೆ ಅಮೂಲ್ಯವಾದ ಉಡುಗೊರೆ ನೀಡಿದ್ದಕ್ಕೆ’ ಧನ್ಯವಾದಗಳು ಎಂದು ಧೋನಿ ತಂಡದ ಆಟಗಾರರನ್ನು ಅಭಿನಂದಿಸಿದ್ದಾರೆ.
Consuming Milk After Eating Fish: ಮೀನು ತಿಂದ್ಮೇಲೆ ತಪ್ಪಿಯೂ ಹಾಲು ಕುಡಿಯಬೇಡಿ..! ಯಾಕೆ ಗೊತ್ತಾ..?
ಟೀಂ ಇಂಡಿಯಾ ಗೆಲುವನ್ನು ಸಂಭ್ರಮಿಸಿ ಇನ್ಸ್ಟ್ರಾದಲ್ಲಿ ಪೋಸ್ಟ್ ಹಾಕಿರುವ ಧೋನಿ, ವರ್ಲ್ಡ್ ಕಪ್ ಚಾಂಪಿಯನ್ಸ್ 2024. ನನ್ನ ಹೃದಯ ಬಡಿತ ಹೆಚ್ಚಾಗಿತ್ತು. ಎಂದಿನಂತೆ ತಾಳ್ಮೆ ಹಾಗೂ ಆತ್ಮವಿಶ್ವಾಸದಿಂದ ಈ ಸಾಧನೆ ಮಾಡಿ ವಿಶ್ವಕಪ್ ಅನ್ನು ತವರಿಗೆ ತಂದಿದ್ದಕ್ಕಾಗಿ ಧನ್ಯವಾದಗಳು. ಹುಟ್ಟುಹಬ್ಬದ ಉಡುಗೊರೆ ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ಧೋನಿ ಬರೆದುಕೊಂಡಿದ್ದಾರೆ.