ಟೀಂ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್ ಅನ್ನು ಭಾರತ ಗೆದ್ದಿದೆ. ಇದರ ಸಂಭ್ರಚಾರಣೆಯಲ್ಲಿದ್ದ ಫ್ಯಾನ್ಸ್ಗೆ ಈಗಾಗಲೇ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಿವೃತ್ತಿ ಘೋಷಿಸುವ ಮೂಲಕ ಶಾಕ್ ನೀಡಿದ್ದರು. ಇದೀಗ ಟೀಂ ಇಂಡಿಯಾದ ಆಲ್ರೌಂಡರ್ ಪ್ಲೇಯರ್ ಆಗಿದ್ದ ರವೀಂದ್ರ ಜಡೇಜಾ ಕೂಡ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಸಿದ್ದು ಸಿಎಂ ಆಗಿದ್ದಾಗ ಮಂಜೂರಾಗಿದ್ದ ಮನೆಗಳನ್ನು ಬಿಜೆಪಿ ಯಾರಿಗೂ ಕೊಟ್ಟಿಲ್ಲ – ಜಮೀರ್..!
ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 7 ರನ್ಗಳಿಂದ ಅಮೋಘವಾಗಿ ಜಯಸಾಧಿಸಿತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ರವೀಂದ್ರ ಜಡೇಜಾ ಅವರು ಕೂಡ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸ್ವತಃ ಜಡೇಜಾ ಅವರೇ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ 2024ರ ಟಿ20 ವಿಶ್ವಕಪ್ ಜೊತೆಗೆ ಫೋಟೋ ಶೇರ್ ಮಾಡಿಕೊಂಡು, “ಹೃದಯ ತುಂಬಿದ ಧನ್ಯವಾದಗಳೊಂದಿಗೆ ನಾನು T20 ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತೇನೆ. ನಾನು ನನ್ನ ದೇಶಕ್ಕಾಗಿ ಅತ್ಯುತ್ತಮವಾದದ್ದನ್ನು ನೀಡಿದ್ದೇನೆ ಮತ್ತು ಇತರ ಸ್ವರೂಪಗಳಲ್ಲಿ ಅದನ್ನು ಮುಂದುವರಿಸುತ್ತೇನೆ. ಟಿ20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿದೆ, ಇದು ನನ್ನ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಹರ್ಷೋದ್ಗಾರಗಳು ಮತ್ತು ಅಚಲ ಬೆಂಬಲಕ್ಕಾಗಿ ಧನ್ಯವಾದಗಳು. ” ಎಂದು ಬರೆದುಕೊಂಡಿದ್ದಾರೆ.
ಇನ್ನು ಟಿ20 ವಿಶ್ವಕಪ್ ಗೆದ್ದ ಬಳಿಕ ವಿರಾಟ್ ಕೊಹ್ಲಿ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ. ಇದು ನಿಜಕ್ಕೂ ಅವರ ಅಭಿಮಾನಿಗಳಷ್ಟೇ ಅಲ್ಲ ಇಡೀ ಕೋಟ್ಯಂತರ ಭಾರತೀಯರಿಗೆ ಶಾಕಿಂಗ್ ನ್ಯೂಸ್ ಅಂದ್ರೆ ತಪ್ಪಾಗಲ್ಲ
ಟೀಂ ಇಂಡಿಯಾ ಗೆದ್ದ ಬಳಿಕ ವಿರಾಟ್ ಕೊಹ್ಲಿ ಮಾತನಾಡಿದ್ರು. ಇದು ನನ್ನ ಕೊನೆಯ ವಿಶ್ವಕಪ್ ಟೂರ್ನಿಯಾಗಿತ್ತು ಅಂತ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದನ್ನು ಕೇಳಿದ ಅಭಿಮಾನಿಗಳಿಗೆ ಬೇಸರವಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)