ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿಅಧಿಕಾರಿಗಳು, ಜನಪ್ರತಿನಿಧಿಗಳ ಸಿಂಡಿಕೇಟ್ನಿಂದ 5 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ”ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು,” ಎಂದು ಒತ್ತಾಯಿಸಿದರು.
New Sim Card Rule: ಸಾರ್ವಜನಿಕರೇ ಗಮನಿಸಿ.. ಇಂದಿನಿಂದ ಸಿಮ್ ಕಾರ್ಡ್ ಸಂಬಂಧ ಹೊಸ ನಿಯಮ ಜಾರಿ!
” ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು. ”2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರ ದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ,” ಎಂದು ದೂರಿದರು.