ಹುಬ್ಬಳ್ಳಿ: ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಆದಾಗಿನಿಂದಲೂ ಈ ಬಗ್ಗೆ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನ ಶಾಸಕರಲ್ಲೇ ಅವರ ಸರ್ಕಾರದ ಬಗ್ಗೆ ಅಸಮಾಧಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಠಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ನಡೆ ವಿರುದ್ಧ ಅವರ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ ಇದು. ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ ಆ ಒಳ ಬೇಗುದಿಯಿಂದ ಯಾವುದೇ ಸಮಯದಲ್ಲಿ ಏನುಬೇಕಾದರೂ ಆಗಬಹುದು.
ಸರ್ಕಾರ ಪತನವೂ ಆಗಬಹುದು ಎಂದುರಾಜ್ಯ ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ಕಿಡಿ ಕಾರಿದರು. ಇದೇ ರೀತಿ ಆದರೆ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರದ ಪತನವಾಗುತ್ತೆ. ಸರ್ಕಾರದ ಒಳ ಬೇಗುದಿಯಿಂದ ಯಾವ ಸಮಯದಲ್ಲಿ ಏನಾಗುತ್ತೆ ಗೊತ್ತಿಲ್ಲ ರಾಜ್ಯ ಸರ್ಕಾರ ತನ್ನ ತಪ್ಪುಗಳನ್ನ ಮುಚ್ಚಿಹಾಕಲು ಬಿಜೆಪಿ ಮೇಲೆ ಬೆರಳು ತೋರಿಸುತ್ತಿದೆ
ಸಾಕಷ್ಟು ಹಗರಣಗಳಾದ್ರೂ ಅವುಗಳನ್ನ ಮುಚ್ಚಿಹಾಕುವ ಕೆಲಸಗಳಾಗುತ್ತಿವೆ ಎಂದು ಅವರು ಆರೋಪ ಮಾಡಿದರು. ಇನ್ನುವಾಲ್ಮೀಕಿನಿಗಮದ ಹಗರಣದಲ್ಲಿ ಕೇವಲ ನಾಗೇಂದ್ರ ಅವರ ತಲೆದಂಡ ಆಯ್ತು, ಮತ್ತೇನೂ ಬೆಳವಣಿಗೆ ಆಗಿಲ್ಲ
ಸರ್ಕಾರ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡಿಲ್ಲ,
New Sim Card Rule: ಸಾರ್ವಜನಿಕರೇ ಗಮನಿಸಿ.. ಇಂದಿನಿಂದ ಸಿಮ್ ಕಾರ್ಡ್ ಸಂಬಂಧ ಹೊಸ ನಿಯಮ ಜಾರಿ!
ಕೇವಲ ಸಿಎಂ ಡಿಸಿಎಂ ವಿಚಾರದಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದೆ. ಇದರಿಂದಾಗಿ ಅಧಿಕಾರಿಗಳಲ್ಲೂ ಗೊಂದಲಮಯ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು. ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಯಡವಟ್ಟು ವಿಚಾರ
ಸರ್ಕಾರ ಅವಾಂತರಳ ಸರ್ಕಾರ ಇದರಿಂದಾಗಿ ಸಮಾಜದಲ್ಲಿ ಸಂಘರ್ಷಗಳು ಉಂಟಾಗುತ್ತೆ ಅನ್ನೋ ಬಗ್ಗೆ ಸರ್ಕಾರ ಯೋಚನೆ ಮಾಡುತ್ತಿಲ್ಲ, ಇದರಿಂದಾಗಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಪರಿಣಾಮ ಬೀರಲಿದೆ. ಸರ್ಕಾರ ಪ್ರತಿಯೊಂದು ವಿಚಾರದಲ್ಲೂ ಅನ್ಯಾಯ ಯಡವಟ್ಟು ಮಾಡುತ್ತಲೇ ಇದೆ ಸರ್ಕಾರ ಪದೇ ಪದೇ ಈ ರೀತಿ ತಪ್ಪುಗಳನ್ನ ಮಾಡುತ್ತಲೇ ಇದ್ರೆ ಡ್ಯಾಮೇಜ್ ಆಗೋದು ಗ್ಯಾರಂಟಿ ಎಂದರು.
ಟಿ- 20 ವಿಶ್ವಕಪ್ ನಲ್ಲಿ ಭಾರತದ ಗೆಲುವು ವಿಚಾರ
ಭಾರತ ತಂಡ ಅಭೂತಪೂರ್ವ ಗೆಲುವು ಸಾಧಿಸಿದ್ದು13 ವರ್ಷಗಳ ನಂತರ ಟೀಂ ಇಂಡಿಯಾ ಗೆಲುವು ಭಾರತೀಯರಿಗೆ ಮತ್ತಷ್ಟು ಹುಮ್ಮಸ್ಸು ತರಿಸಿದೆ. ಭಾರತ ತಂಡದ ಈ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ ಲಾಡ್ ಆರೋಪ ವಿಚಾರ, ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಈಗಾಗಲೇ ಸ್ಪಷ್ಟತೆ ನೀಡಿದೆ
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅವರ ಸಚಿವರು ಯಾರೂ ಪ್ರಶ್ನೆ ಮಾಡಿಲ್ಲಆದ್ರೆ ಸಂತೋಷ ಲಾಡ್ ಅವರು ಕೇವಲ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ. ಕೇಂದ್ರದ ವಿರುದ್ಧ ಮಾತನಾಡಿದರೆ ಏನೋ ಲಾಭ ಆಗುತ್ತೆ ಅನ್ನೋಭ್ರಮೆಯಲ್ಲಿಸಂತೋಷ ಲಾಡ್ ಇದ್ದಾರೆಕೇಂದ್ರ ಸರ್ಕಾರವನ್ನ ಬೈಯೋದೇ ಲಾಡ್ ಅವರ ಕೆಲಸ ಸಂತೋಷ ಲಾಡ್ ಆರೋಪಕ್ಕೆ ತಿರುಗೇಟು ನೀಡಿದರು.