ಮೈಸೂರು: ವಾಲ್ಮೀಕಿ ನಿಗಮದ ಬಳಿಕ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನ ಮುಚ್ಚಿಹಾಕಲು ಸಿಎಂ ಹಾಗೂ ಡಿಸಿಎಂ ರಾಜಕೀಯ ನಾಟಕ ಆಡುತ್ತಿದ್ದಾರೆ.
New Sim Card Rule: ಸಾರ್ವಜನಿಕರೇ ಗಮನಿಸಿ.. ಇಂದಿನಿಂದ ಸಿಮ್ ಕಾರ್ಡ್ ಸಂಬಂಧ ಹೊಸ ನಿಯಮ ಜಾರಿ!
ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಾಂತಾಗಿದೆ. ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನ ಬಿಟ್ಟು ಕೊಟ್ಟಿದ್ದಾರೆ. ಮುಡಾ ಲೋಟಿಯನ್ನ ನೋಡಿದರೇ ಚಾಲ್ಸ್ ಶೋಬರಾಜ್ನದ್ದೂ ಏನು ಹಗರಣ ಇಲ್ಲ ಅಂದುಕೊಳ್ಳುತ್ತಾರೆ ಎಂದು ಅಚ್ಚರಿ ಬಾಂಬ್ ಸಿಡಿಸಿದ್ದಾರೆ.
ಮುಡಾ ಹಗರಣ ಸಿಬಿಐಗೆ ವಹಿಸಿ:
ಮುಡಾ ಹಗರಣದ ಬಗ್ಗೆ ಬಿಜೆಪಿ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸಮಗ್ರ ತನಿಖೆಯಾಗಬೇಕು. ಯಾರೇ ಈ ಪ್ರಕರಣದಲ್ಲಿದ್ದರೂ ಅವರ ತಲೆ ತಂಡ ಆಗಬೇಕು. ಬಡವರಿಗೆ, ದಲಿತರಿಗೆ ಜಾಗ ಕೊಡಲು ಆಗುವುದಿಲ್ಲ, ಲೋಟಿಕೋರರಿಗೆ ಜಾಗ ಕೊಡುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಎಲ್ಲಾ ದರಗಳು ಹೆಚ್ಚಾಗಿದೆ ಎಂದು ಕಿಡಿ ಕಾರಿದ್ದಾರೆ.