ಹಾವೇರಿ: ನಾವು ಅಧಿಕಾರದಲ್ಲಿದ್ದೇವೆ, ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಯಾವ್ಯಾವುದೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ಮಾಡಬಾರದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ನಾವು ಅಧಿಕಾರದಲ್ಲಿದ್ದೇವೆ, ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಯಾವ್ಯಾವುದೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ಮಾಡಬಾರದು. ಲೋಕಸಭೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸರ್ಕಾರ ಪತನವಾಗುತ್ತೆ ಎನ್ನುತ್ತಿರುವ ಬಿಜೆಪಿಗರ ಹಗಲುಗನಸು. ಪ್ರಧಾನಿ ನರೇಂದ್ರ ಮೋದಿ ಈ ಬಾರಿ 400 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದರು.
Food Safety: ಆಹಾರದಲ್ಲಿ ಕೃತಕ ಬಣ್ಣ ಬಳಸುವುದರಿಂದ ಏನೆಲ್ಲಾ ಆರೋಗ್ಯ ಸಮಸ್ಯೆಗಳಿದೆ ಗೊತ್ತಾ..? ಇಲ್ಲಿದೆ ಮಾಹಿತಿ
ಆದರೆ ಬಿಜೆಪಿಯವರು 240 ಸ್ಥಾನಗಳ ಮೇಲೆ ಏರಲಿಲ್ಲ. ಮೊದಲು ಅವರು ಸರ್ಕಾರವನ್ನು ರಕ್ಷಣೆ ಮಾಡಿಕೊಳ್ಳಲಿ ಎಂದು ಹೇಳಿದರು. ಒಂದು ಕಡೆ ನಿತೀಶ್ ಇದ್ದಾರೆ. ಇನ್ನೊಂದು ಕಡೆ ಚಂದ್ರಬಾಬು ನಾಯ್ಡು ಇದ್ದಾರೆ. ಅವರ ಶಕ್ತಿ ಮೇಲೆ ಕೇಂದ್ರದಲ್ಲಿ ಇವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆ ಸರ್ಕಾರ ಉಳಿಸಿಕೊಳ್ಳುವ ಪ್ರಯತ್ನವನ್ನು ಬಿಜೆಪಿಯವರು ನೋಡಿಕೊಳ್ಳಲಿ, ಅದನ್ನು ಬಿಟ್ಟು ಸುಭದ್ರವಾದ ರಾಜ್ಯ ಸರ್ಕಾರ ಪತನವಾಗುತ್ತೆ ಎಂದರೆ ಹೇಗೆ? ಎಂದು ಪ್ರಶ್ನಿಸಿದರು.