ತುಮಕೂರು: ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಹಲ್ಲೆ ಮಾಡಿದ್ದು, ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತಂಡಗ ಗ್ರಾಮ ಪಂಚಾಯತಿಯ ಸದಸ್ಯ ಮೋಹನ್ ಮೇಲೆ ಉಪಧ್ಯಾಕ್ಷ ಚನ್ನಬಸವೇಗೌಡನಿಂದ ಹಲ್ಲೆ ಮಾಡಲಾಗಿದೆ.
Benefits of Ivy Gourd: ತೊಂಡೆಕಾಯಿಯ ಈ ಪ್ರಯೋಜನಗಳನ್ನು ತಿಳಿದರೆ ದಿನಾ ತಿನ್ನುವಿರಿ..!
ತಂಡಗ ಗ್ರಾಮ ಪಂಚಾಯತಿ ಅಧ್ಯಕ್ಷನ ಅವಿಶ್ವಾಸ ಮಂಡನೆಗೆ ಸಹಿ ಹಾಕಲು ಮೋಹನ್ ನಿರಾಕರಣೆ ಮಾಡಿದಕ್ಕೆ ಚನ್ನಬಸವೇಗೌಡ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ.
ಮದುವೆ ಸಮಾರಂಭಕ್ಕೆ ಹೋಗಿದ್ದ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವವರೆಗೂ ಹೋಗಿದೆ. ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.