ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಟೀಮ್ ಇಂಡಿಯಾ ತವರಿಗೆ ವಾಪಸ್ ಆಗೋದು ಮತ್ತಷ್ಟು ವಿಳಂಬ ಆಗಲಿದೆ.
ಕೆರಿಬಿಯನ್ ರಾಷ್ಟ್ರದಲ್ಲಿ(Caribbean country) ಬೀಸುತ್ತಿರುವ ಭಾರೀ ಚಂಡಮಾರುತದ ಅಬ್ಬರ ಮತ್ತೆ ಹೆಚ್ಚಾಗಿರುವ ಕಾರಣ ಬಾರ್ಬಡೋಸ್ನಲ್ಲಿ ವಿದ್ಯುತ್ ಮತ್ತು ನೀರು ಪೂರೈಕೆಗೆ ತೊಂದರೆಯಾಗಿದೆ. ಜತೆಗೆ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಹೀಗಾಗಿ ಆಟಗಾರರು ಭಾರತಕ್ಕೆ ಬರುವುದು ಇನ್ನೂ 2 ದಿನ ತಡವಾಗುವ ಸಾಧ್ಯತೆ ಕಂಡುಬಂದಿದೆ.
ಎಚ್ಚರ: ನಿಮ್ಮ ಏಕಾಗ್ರತೆ ಶಕ್ತಿಯೇ ಕುಂಠಿತಗೊಳಿಸುತ್ತೆ ಈ ಆಹಾರಗಳ ಸೇವನೆ..!
ಗಂಟೆಗೆ 130 ಕಿ.ಮೀ.ಗೂ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಪ್ರವಾಸಿಗರಿಗೆ ಒಳಾಂಗಣದಲ್ಲೇ ಉಳಿದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಬಾರ್ಬಡಾಸ್ನಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದು, ಜನರಿಗೆ ಮನೆಗಳಿಂದ ಹೊರಬರದಂತೆ ಸೂಚಿಸಲಾಗಿದೆ.
ಸದ್ಯ ಟೀಮ್ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್ನ ಹೊಟೇಲ್ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ