ಕಲಬುರಗಿ: ರೈಲಿಗೆ ತಲೆಕೊಟ್ಟು ಸರ್ಕಲ್ ಇನ್ಸ್ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ರೈಲ್ವೆ ಹಳಿ ಮೇಲೆ ನಡೆದಿದೆ. ಬಾಪುಗೌಡ (45) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿಯಾಗಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವೈಯರಲೆಸ್ ವಿಭಾಗದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
Pranavananda Swamiji: ನೀವು ಮಠಕ್ಕೆ ಕಾಲಿಡಬೇಡಿ! DCMಗೆ ಎಚ್ಚರಿಸಿದ್ರಾ ಪ್ರಣವಾನಂದ ಸ್ವಾಮೀಜಿ!?
ಕೆಲ ದಿನಗಳಿಂದ ಮೌತ್ ಕ್ಯಾನ್ಸರ್ನಿಂದ ಬಾಪುಗೌಡ ಬಳಲುತ್ತಿದ್ದರು, ಈ ಕ್ಯಾನ್ಸರ್ ಕಾಯಿಲೆಯಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಇದೇ ಕಾರಣಕ್ಕೆ ಬಾಪುಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹವನ್ನ ಕಲಬುರಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದೂ, ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.