ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣ ತಣ್ಣಗಾಗುವಷ್ಟರಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಕೇಳಿ ಬರ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮಾರು ಕೋಟಿ – ಕೋಟಿ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿಗೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಿಸಿದ್ದಾರೆ ಅಂತ ವಿಪಕ್ಷ ಬಿಜೆಪಿ ಆರೋಪ ಮಾಡ್ತಿವೆ, ಬಿಜೆಪಿ ಆರೋಪಕ್ಕೆ ಸಿಎಂ ಸ್ಪಷ್ಟನೆ ಕೊಟ್ಟಿದ್ದು. ಮೂಡಾ ಅಕ್ರಮ ಖಂಡಿಸಿ ನಾಳೆ ಸಿಎಂ ಮನೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧವಾಗಿದೆ.
ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ನಾಗೇಂದ್ರ ತಲೆದಂಡವಾದ ಬೆನ್ನಲ್ಲೆ ಇದೀಗ ಸರ್ಕಾರದ ವಿರುದ್ದ ಮತ್ತೊಂದು ಆರೋಪ ಕೇಳಿಬಂದಿದೆ. ಅದ್ರಲ್ಲೂ ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕೋಟಿ- ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಅಂತ ವಿಪಕ್ಷಗಳು ಸರ್ಕಾರದ ವಿರುದ್ದ ಪ್ರಶ್ನೆಗಳ ಸುರಿಮಳೆ ಮಾಡ್ತಿದ್ದಾರೆ. ಅದ್ರಲ್ಲೂ ಸಿಎಂ ಸಿದ್ದರಾಮಯ್ಯ ತಮ್ಮ ಪತ್ನಿಗೆ ಅಕ್ರಮವಾಗಿ ನಿವೇಶನ ಮಂಜೂರು ಮಾಡಿಸಿದ್ದಾರೆ ಎಂದು ಸಿಎಂ ತಲೆದಂಡಕ್ಕೆ ಮುಗಿಬಿದ್ದಿದೆ ಕೇಸರಿ ಟೀಂ.
Health Tips: ಸೌತೆಕಾಯಿ ತಿಂದ ನಂತರ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ..!
ಮೂಡಾ ಅಕ್ರಮದ ಬಗ್ಗೆ ಮಾತನಾಡಿದ ಸಿಟಿ ರವಿ ಹಗರಣದ ಮಾಹಿತಿ ಸಂಗ್ರಹ ಮಾಡ್ತಿದ್ದೇವೆ. ಅಗೆದಷ್ಟು, ಬಗೆದಷ್ಟು ಹೊರಗೆ ಬರ್ತಿದೆ. 15 ರಂದು ಅಧಿವೇಶನ ಆರಂಭವಾಗ್ತಿದೆ ಅಧಿವೇಶನದಲ್ಲಿ ಎಲ್ಲಾ ದಾಖಲೆ ಇಟ್ಟು ಚರ್ಚೆ ಮಾಡುತ್ತೇವೆ ಎಲ್ಲರ ಜಾತಕ ವಿಧಾನಸಭೆಯಲ್ಲಿ ಬಿಚ್ಚಿಡ್ತೇವೆ ಅಂತ ಎಚ್ಚರಿಕೆ ಕೊಟ್ಟಿದ್ದಾರೆ ರವಿ. ಇನ್ನು ಮಾಜಿ ಸಚಿವ ಸುನೀಲ್ ಕುಮಾರ್ ಸಹ ಆಕ್ರೋಶ ಹೊರಹಾಕಿದ್ದಾರೆ ಸ್ವತಃ ಮುಖ್ಯಮಂತ್ರಿ ಜಿಲ್ಲೆಯಲ್ಲೇ ಹಗರಣ ನಡೆದಿದ್ರೂ ಸಿಎಂ ಮೌನವಾಗಿದ್ದಾರೆ.ಅವರ ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದೆ, ಸಿದ್ದರಾಮಯ್ಯ ಅವರು ತಮ್ಮ ನೈತಿಕತೆ ಕಳೆದುಕೊಂಡಿದ್ದಾರೆ. ಹೌಸಿಂಗ್ ಬೋರ್ಡ್ ನಿವೇಶನ ಹಗರಣ ಕಂಡುಬರ್ತಿದೆ ಅಧಿವೇಶನ ನಡೆಯುವ ಸಂಧರ್ಭದಲ್ಲಿ ಎಲ್ಲಾ ದಾಖಲೆ ಇಟ್ಟು ಚರ್ಚೆ ಮಾಡುತ್ತೇವೆ ಅಂತ ಕಿಡಿ ಕಾರಿದ್ದಾರೆ.